
ಚಿತ್ರದುರ್ಗ ಮೇ.1
ಚಲಿಸುತ್ತಿದ್ದ ಇನ್ನೋವಾ ಕಾರಿನ ಟೈರ್
ಸ್ಫೋಟಗೊಂಡು ಚಾಲಕನ ನಿಯಂತ್ರಣ ತಪ್ಪಿಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ಗುರುವಾರ ಬೆಳಗ್ಗೆ
7 ಗಂಟೆಗೆ ನಡೆದಿದೆ.
ಚಿತ್ರದುರ್ಗ ಹೊರವಲಯದ ಸೀಬಾರ ಸಮೀಪದ ಗೋಶಾಲೆ ಬಳಿ ನಡೆದಿದೆ. ಘಟನೆಯಲ್ಲಿ ಪೊಲೀಸ್ ಕಾನ್ಸ್ಟೇಬಲ್ ಅರ್ಜುನ್ (28) ಹಾಗೂ ಸರವಣ್
(30), ಶ್ರೀಧರ್ ಮೃತ ದುರ್ದೈವಿಗಳು ಎಂದುvಗುರುತಿಸಲಾಗಿದೆ.



ಮೃತರನ್ನ ತಮಿಳುನಾಡಿನ ಕೃಷ್ಣಗಿರಿ
ಮೂಲದವರು ಎಂದು ತಿಳಿದು ಬಂದಿದೆ. ಇನ್ನೋವಾ ಕಾರಿನಲ್ಲಿ 9 ಮಂದಿ ಸ್ನೇಹಿತರು ಗೋವಾ ಪ್ರವಾಸಕ್ಕೆ ತೆರಳುವ ಮಾರ್ಗ ಮಧ್ಯದಲ್ಲಿ ಈ ಅಪಘಾತ ಸಂಭವಿಸಿದೆ. 6 ಮಂದಿ ಗಾಯಾಳುಗಳ ಪೈಕಿ ಮೂವರ
ಸ್ಥಿತಿ ಗಂಭೀರ ಎನ್ನಲಾಗಿದ್ದು, ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆ ಸಿಪಿಐ ಮುದ್ದುರಾಜ್
ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
About The Author
Discover more from JANADHWANI NEWS
Subscribe to get the latest posts sent to your email.