ವರದಿ: ಕೆ.ಟಿ.ಮೋಹನ್ ಕುಮಾರ್
ಸಾಲಿಗ್ರಾಮ (ಮೈಸೂರು ಜಿಲ್ಲೆ): ಸಾಲಿಗ್ರಾಮ ತಾಲೂಕಿನ ಮಿರ್ಲೆ ಗ್ರಾಮದ ಶ್ರೀ ಹುಣಸಮ್ಮ ತಾಯಿ ದೇವಾಲಯದ ಮಾಜಿ ಧರ್ಮದರ್ಶಿಗಳಾದ ಎಂ.ಬಿ.ಲಕ್ಷ್ಮೇಗೌಡರು (83) ಗುರುವಾರ ನಿಧರಾಗಿದ್ದಾರೆ.
ಮೃತರು ಪತ್ನಿ, ಮಿರ್ಲೆಯ ನವಗ್ರಾಮದೇವತೆ ಹುಣಸಮ್ಮ ತಾಯಿ ದೇವಾಲಯದ ಧರ್ಮದರ್ಶಿ ಎಂ.ಎಲ್.ಲೋಕೇಶ್ ಸೇರಿದಂತೆ ಇಬ್ಬರು ಪುತ್ರರು, ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಮಾಜಿ ಸಚಿವ ಸಾ.ರಾ.ಮಹೇಶ್, ಕೆಪಿಸಿಸಿ ಕಾರ್ಯಕಾರಿಣಿ ಸದಸ್ಯ ದೊಡ್ಡಸ್ವಾಮೇಗೌಡ, ಮುಡಾ ಮಾಜಿ ಅಧ್ಯಕ್ಷ ಎಚ್.ಎನ್.ವಿಜಯ್, ನವನಗರ ಅರ್ಬನ್ ಬ್ಯಾಂಕ್ ಅಧ್ಯಕ್ಷ ಕೆ.ಎನ್.ಬಸಂತ್, ಮೈಮುಲ್ ನಿರ್ದೇಶಕ ಎ.ಟಿ.ಸೋಮಶೇಖರ್ ಸೇರಿದಂತೆ ಹಲವು ಗಣ್ಯರುಗಳು ಮೃತರ ಅಂತಿಮ ದರ್ಶನ ಪಡೆದರು.
ಮೃತರ ಅಂತ್ಯಕ್ರಿಯೆಯು ಮಿರ್ಲೆ ಗ್ರಾಮದ ಕೆರೆಯ ಬಳಿ ಇರುವ ಅವರ ಜಮೀನಿನಲ್ಲಿ ಗುರುವಾರ ನೆರವೇರಿತು.
About The Author
Discover more from JANADHWANI NEWS
Subscribe to get the latest posts sent to your email.