December 14, 2025
IMG-20250402-WA0129.jpg


ಚಳ್ಳಕೆರೆ:
ಜಮೀನ ಬೇಲಿಗೆ ಬೆಂಕಿ ಇಟ್ಟ ವಿಚಾರಕ್ಕೆ ದೊಣ್ಣೆಯಿಂದ ಹಲ್ಲೆ ಮಾಡಿದ ಕಾರಣ ಓರ್ವನಿಗೆ ಕೈ ಮುರಿದು ಮತ್ತೊರ್ವ ಮಹಿಳೆಗೆ ಗಾಯಗಳಾದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಚಳ್ಳಕೆರೆ ತಾಲ್ಲೂಕಿನ ಯಲಗಟ್ಟೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ವಿರುಪಾಕ್ಷ ಎನ್ನುವ ವ್ಯಕ್ತಿ ಬೇಲಿಗೆ ಬೆಂಕಿ ಇಟ್ಟಿದ್ದು ಈ ಹಿನ್ನೆಲೆಯಲ್ಲಿ ಸ್ವಲ್ಪ ಮೆಕ್ಕೆ ಜೋಳ ಬೆಳೆ ಸುಟ್ಟಿದೆ ಬೇಲಿಗೆ ಬೆಂಕಿ ಇಟ್ಟ ವಿಚಾರಕ್ಕೆ ಪ್ರಶ್ನೆ ಮಾಡಿದಕ್ಕೆ ವಿರುಪಾಕ್ಷ , ಲಕ್ಷ್ಮೀದೇವಿ ಚಂದ್ರಣ್ಣ ಸುದೀಪ್ ಉಮೇಶ ಇವರು ಗುಂಪು ಕಟ್ಟಿಕೊಂಡು ಬಂದು ಕೈಯಲ್ಲಿದ್ದ ದೊಣ್ಣೆ ಹಾಗೂ ಕಲ್ಲುಗಳಿಂದ ಚನ್ನವೀರ ಹಾಗೂ ನೇತ್ರಾವತಿ ಚೆಲಿಮಕ್ಕೆ ಇವರ ಮೇಲೆ ಹಲ್ಲೆ ಮಾಡಿದ್ದಾರೆ.ಚನ್ನವೀರ ಇವರಗೆ ಕೈ ಮುರಿದ್ದು ಚಲಿಮಕ್ಕ ಎನ್ನುವ ಮಹಿಳೆಗೆ ತಲೆ ಹಾಗೂ ಇತರೆ ಭಾಗಗಳಿಗೆ ಗಾಯಗಳಾಗಿದ್ದು ಚಳ್ಳಕೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನಂತರ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಆಸ್ಪತ್ರೆ ಗೆ ದಾಖಲಿಸಿದ್ದಾರೆ.

ಈ ಗಲಾಟೆ ವಿಚಾರ ಕುರಿತಂತೆ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕಣ ದಾಖಲಾಗಿದ್ದು.

ಹಲ್ಲೆ ಮಾಡಿಸಿದ ವಿರುಪಾಕ್ಷ ಸಹ ‌ ಪ್ರಕರಣವನ್ನ ದಾಖಲಿಸಿದ್ದಾರೆ….

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading