
ವರದಿ: ಕೆ.ಟಿ.ಮೋಹನ್ ಕುಮಾರ್
ಮೈಸೂರು ಜಿಲ್ಲೆಯ ಸಾಲಿಗ್ರಾಮ ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಜೆಡಿಎಸ್ ಪಕ್ಷದ ಬೆಂಬಲಿತ ಅಭ್ಯರ್ಥಿ ಸತೀಶ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ಹಿಂದೆ ಅಧ್ಯಕ್ಷರಾಗಿದ್ದ ಕರುಣ್ ಕುಮಾರ್ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ತೆರವಾದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಗೆ ಸತೀಶ್ ಅವರನ್ನು ಹೊರತುಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸದ ಕಾರಣ ಸತೀಶ್ ಅವರು ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾ ಅಧಿಕಾರಿಯಾಗಿದ್ದ ಸಹಕಾರ ಇಲಾಖೆಯ ಅಧಿಕಾರಿ ಗಿರೀಶ್ ರವರು ಅಧಿಕೃತವಾಗಿ ಘೋಷಣೆ ಮಾಡಿದರು.


ಚುನಾವಣಾ ಪ್ರಕ್ರಿಯೆಯಲ್ಲಿ ಸಂಘದ ನಿರ್ದೇಶಕರುಗಳಾದ ಎಸ್.ಬಿ.ಅಶೋಕ್, ಕರುಣ್ ಕುಮಾರ್, ಪಾಪಣ್ಣ, ಸತೀಶ್, ಮಹೇಶ್, ಅನಂತ, ಅಶ್ವಿನಿ, ಚಂದ್ರನಾಯಕ, ಜಯರಾಮು, ರುಕ್ಮಿಣಿಯಮ್ಮ, ಸಣ್ಣದೇವಮ್ಮ, ಸಿಇಓ ಸುರೇಶ, ಸಿಬ್ಬಂದಿಗಳಾದ ಮಧು, ಶಶಿಕುಮಾರ್ ಭಾಗವಹಿಸಿದ್ದರು.
ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಸಾ.ರಾ.ನಂದೀಶ್ ಅವರು ನೂತನ ಅಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿ ಸಂಘದ ಆಡಳಿತ ಮಂಡಳಿಗೆ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡುವ ಸಂದರ್ಭದಲ್ಲಿ ಎಲ್ಲಾ ನಿರ್ದೇಶಕರುಗಳು ಒಮ್ಮತದ ಅಭಿಪ್ರಾಯದೊಂದಿಗೆ ಹಿರಿಯ ಮುಖಂಡರುಗಳ ಸಲಹೆ ಸೂಚನೆಗಳಂತೆ ಅಧ್ಯಕ್ಷರನ್ನು ಆಯ್ಕೆ ಮಾಡಿರುವುದು ಒಳ್ಳೆಯ ಬೆಳವಣಿಗೆಯಾಗಿದೆ. ಇದೇ ಹಾದಿಯಲ್ಲಿ ಮುಂದಿನ ದಿನಗಳಲ್ಲಿಯೂ ಸಂಘದವರು ನಡೆದುಕೊಳ್ಳಬೇಕೆಂದು ಸಲಹೆ ನೀಡಿದರು. ನೂತನ ಅಧ್ಯಕ್ಷರು ಸಂಘದ ವತಿಯಿಂದ ರೈತರಿಗೆ ದೊರೆಯುವ ಸೌಲಭ್ಯಗಳನ್ನು ಸಕಾಲಕ್ಕೆ ದೊರಕುವಂತೆ ಮಾಡಬೇಕು. ಆ ಮೂಲಕ ಸಂಘದ ಸದಸ್ಯರುಗಳಿಗೆ ಪ್ರಾಮಾಣಿಕ ಸೇವೆಯನ್ನು ಕಲ್ಪಿಸಿ ಕೊಡುವುದರ ಮೂಲಕ ಸಂಘದ ಬೆಳವಣಿಗೆಗೆ ಶ್ರಮಿಸಬೇಕು ಎಂದರು.
ನೂತನ ಅಧ್ಯಕ್ಷರನ್ನು ಅವರ ಬೆಂಬಲಿಗರು ಹಾಗೂ ಮುಖಂಡರುಗಳು ಅಭಿನಂದಿಸಿ, ಪಟಾಕಿ ಸಿಡಿಸಿ, ಸಿಹಿ ವಿತರಿಸಿ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಸಾಲಿಗ್ರಾಮ ತಾಲೂಕು ಜೆಡಿಎಸ್ ಅಧ್ಯಕ್ಷ ಮೆಡಿಕಲ್ ರಾಜಣ್ಣ, ಎಪಿಎಂಸಿ ಮಾಜಿ ಅಧ್ಯಕ್ಷರಾದ ಎಸ್.ಕೆ.ಮಧುಚಂದ್ರ, ಕುಪ್ಪಳ್ಳಿ ಸೋಮಶೇಖರ್, ಗ್ರಾ.ಪಂ. ಮಾಜಿ ಅಧ್ಯಕ್ಷರಾದ ಎಸ್.ಆರ್.ಪ್ರಕಾಶ್, ಪುರುಷೋತ್ತಮ್, ಸದಸ್ಯರಾದ ಗಂಗಾಧರ್, ಹರೀಶ್, ಮಾಜಿ ಸದಸ್ಯರಾದ ಅಯಾಜ್ ಅಹ್ಮದ್, ಅಂಕನಹಳ್ಳಿ ಗ್ರಾ.ಪಂ. ಅಧ್ಯಕ್ಷ ಬಾಬು, ಗಾರೆ ಕೆಲಸಗಾರರ ಸಂಘದ ಅಧ್ಯಕ್ಷ ಜಗದೀಶ್, ವಾಹನ ಚಾಲಕರ ಸಂಘದ ಅಧ್ಯಕ್ಷ ಮಂಜುನಾಥ್, ಮುಖಂಡರಾದ ಎಸ್.ಕೆ.ಯೋಗಣ್ಣ, ಸಾ.ರಾ.ಸತೀಶ್, ದಡದಹಳ್ಳಿ ನಟರಾಜ್, ಕುಮಾರ್, ಲಾಲು ಸಾಹೇಬ್, ತಿಮ್ಮೇಗೌಡ, ಮಹೇಂದ್ರ, ವಸಂತ, ಫಿಶ್ ಶಿವು, ವಿಶ್ವ, ಪಿಂಕಿಸ್ವಾಮಿ, ಮಧು, ಪ್ರಕಾಶ್, ಹೋಟೆಲ್ ರಾಮಣ್ಣ, ಬಸವರಾಜ್, ರಾಜು, ಸುರೇಶ, ನರಸಿಂಹೇಗೌಡ, ಮಹದೇವ ಸೇರಿದಂತೆ ಹಲವರು ಇದ್ದರು.
About The Author
Discover more from JANADHWANI NEWS
Subscribe to get the latest posts sent to your email.