ನೇರಲಗುಂಟೆ ಯಲ್ಲಿ ವಿಜೃಂಭಣೆಯಿಂದ ನಡೆದ ಆಂಜನೇಯಸ್ವಾಮಿ ರಥೋತ್ಸವ
.
ನಾಯಕನಹಟ್ಟಿ: ಸಮೀಪದ ನೇರಲಗುಂಟೆ ಗ್ರಾಮದಲ್ಲಿ ನೆಲೆಸಿರುವ ಆರಾಧ್ಯ ದೈವ ಶ್ರೀ ಅಂಜನೇಯಸ್ವಾಮಿ ರಥೋತ್ಸವ ಸೋಮವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ
ನಡೆಯಿತು.




ಬೆಳಿಗ್ಗೆ 8 ಗಂಟೆಯಿಂದಲೇ ಬಣ್ಣ ಬಣ್ಣದ ಬಾವುಟಗಳಿಂದ ಹೂವಿನ ಹಾರಗಳಿಂದ ರಥವನ್ನು ಶೃಂಗಾರ ಮಾಡಲಾಯಿತು.
ಮಧ್ಯಾಹ್ನ 2 ಗಂಟೆಗೆ ಶ್ರೀ ಅಂಜನೇಯಸ್ವಾಮಿ ಉತ್ಸವ ಮೂರ್ತಿಯನ್ನು ರಥದಲ್ಲಿ ಸಕಲ ಪೂಜಾ ವಿಧಿ ವಿಧಾನಗಳಿಂದ ಪ್ರತಿಷ್ಠಾಪಿಸಲಾಯಿತು.
ಇನ್ನೂ ಶ್ರೀ ಅಂಜನೇಯಸ್ವಾಮಿ ರಥೋತ್ಸವಕ್ಕೆ ಗ್ರಾಮದ ಗೊಂಚಿಗರ್ ನಾರಾಯಣಪ್ಪ ಮನೆಯಿಂದ ಬಲಿ ಅನ್ನ ತರಲಾಯಿತು.
ಕಾಸು
ಮೀಸಲು ಮೊಸರು ತುಂಬಾ ಜೆನಿಗಿ ಹಾಲು
ತಂದು ಶ್ರೀ ಅಂಜನೇಯಸ್ವಾಮಿ ರಥದ ಗಾಲಿಗಳಿಗೆ ಎಡೆ ಹಾಕಲಾಯಿತು.
ನಂತರ ಮಹಾಮಂಗಳಾರತಿ ನೆರವೇರಿಸಿ.
ಇನ್ನೂ ಮಧ್ಯಾಹ್ನ 3 ಗಂಟೆ ರಥಕ್ಕೆ ಮಾಜಿ ಶಾಸಕ ಎಸ್ ತಿಪ್ಪೇಸ್ವಾಮಿ ಹಾಗೂ ಗ್ರಾಮಸ್ಥರು ಚಾಲನೆ ನೀಡಿದರು.
ಇನ್ನೂ ರಥೋತ್ಸವಕ್ಕೂ ಮುಂಚಿತವಾಗಿ ಮುಕ್ತಿ ಬಾವುಟ ಹರಾಜ್ ಪ್ರಕ್ರಿಯೆ ನಡೆಯಿತು. ನೇರಲಗುಂಟೆ ಗ್ರಾಮ ಪಂಚಾಯತಿ ಸದಸ್ಯ ಭತ್ತಯ್ಯನಹಟ್ಟಿ ಡಿ. . ತಿಪ್ಪೇಸ್ವಾಮಿ ₹ 1,50,000 ಸಾವಿರ ರೂಪಾಯಿಗಳಿಗೆ ಮುಕ್ತಿ ಬಾವುಟವನ್ನು ಪಡೆದುಕೊಂಡರು.
ಇದೇ ವೇಳೆ ಮಾಜಿ ಶಾಸಕ, ಎಸ್ ತಿಪ್ಪೇಸ್ವಾಮಿ ಮಾತನಾಡಿದರು ಗ್ರಾಮದಲ್ಲಿ ಶ್ರೀ ಆಂಜನೇಯ ಸ್ವಾಮಿ ಜಾತ್ರೋತ್ಸವವನ್ನು ಸುಮಾರು 32 ವರ್ಷಗಳಿಂದಲೂ ಆಚರಣೆ ಮಾಡುತ್ತಾ ಬಂದಿದ್ದೇವೆ ಗ್ರಾಮದಲ್ಲಿ ಶಾಂತಿ ನೆಮ್ಮದಿ ಈ ಭಾಗದ ರೈತರಿಗೆ ಉತ್ತಮ ಮಳೆ ಬೆಳೆ ಶ್ರೀ ಆಂಜನೇಯ ಸ್ವಾಮಿ ನೀಡಲಿ ಎಂದರು.
ಇದೇ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯೆ ಶಶಿರೇಖಾ ಮುತ್ತಯ್ಯ, ಕಾಂಗ್ರೆಸ್ ಮುಖಂಡ ನೇರಲಗುಂಟೆ ಸೂರನಾಯಕ, ರಾಮಪ್ಪ, ಭೀಮನಕೆರೆ ಪಾಲಯ್ಯ, ಬಗರ್ ಹುಕುಂ ಕಮಿಟಿ ಸದಸ್ಯ ಪಿ ಜಿ ಬೋರನಾಯಕ, ವರವು ಕಾಟಯ್ಯ, ಶಂಕರ್ ಮೂರ್ತಿ, ಜಿ. ಎಸ್ ತಿಪ್ಪೇಸ್ವಾಮಿ, ನೇರಲಗುಂಟೆ ಗ್ರಾ.ಪಂ. ಅಧ್ಯಕ್ಷರು ಉಪಾಧ್ಯಕ್ಷರು ಸರ್ವ ಸದಸ್ಯರು ಗ್ರಾಮ ಪಂಚಾಯತಿ ಸಿಬ್ಬಂದಿ ದ್ವಿತೀಯ ದರ್ಜೆ ಸಹಾಯಕ ಎನ್ ಬಿ ವೀರನಾಯಕ, ಸೇರಿದಂತೆ ಸಮಸ್ತ ಊರಿನ ಗ್ರಾಮಸ್ಥರು ವಿವಿಧ ಹಳ್ಳಿಗಳ ಗ್ರಾಮಸ್ಥರು ಇದ್ದರು
About The Author
Discover more from JANADHWANI NEWS
Subscribe to get the latest posts sent to your email.