ನಗರಂಗೆರೆ: ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಚ್ಛತೆ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತಾ ಕಾರ್ಮಿಕರ ದಿನನಿತ್ಯದ ಕೆಲಸಕ್ಕೆ ಅನುಕೂಲವಾಗುವಂತೆ ನಗರಂಗೆರೆ ಗ್ರಾಮ ಪಂಚಾಯಿತಿ ವತಿಯಿಂದ ನೂತನ ಸೈಕಲ್ಗಳನ್ನು ವಿತರಿಸಲಾಯಿತು. ಗ್ರಾಮದಲ್ಲಿ ಸ್ವಚ್ಛತೆ ಕಾಪಾಡುವಲ್ಲಿ ಸ್ವಚ್ಛತಾ ಕಾರ್ಮಿಕರು ವಹಿಸುತ್ತಿರುವ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಅವರ ಕಾರ್ಯಕ್ಷಮತೆ ಹೆಚ್ಚಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಗಳಮ್ಮ ರಂಗಸ್ವಾಮಿ ಮಾತನಾಡಿ, ಸ್ವಚ್ಛತಾ ಕಾರ್ಮಿಕರ ಶ್ರಮದಿಂದಲೇ ಗ್ರಾಮ ಸ್ವಚ್ಛ, ಸುಂದರ ಹಾಗೂ ಆರೋಗ್ಯಕರವಾಗಿರಲು ಸಾಧ್ಯವಾಗಿದೆ. ಮಳೆ, ಬಿಸಿಲು ಎಂಬುದನ್ನೇ ಲೆಕ್ಕಿಸದೆ ದಿನನಿತ್ಯ ಸೇವೆ ಸಲ್ಲಿಸುತ್ತಿರುವ ಕಾರ್ಮಿಕರ ಸೇವೆಗೆ ಪಂಚಾಯಿತಿ ಸದಾ ಬೆಂಬಲವಾಗಿ ನಿಂತಿದೆ ಎಂದು ತಿಳಿಸಿದರು. ಮುಂದಿನ ದಿನಗಳಲ್ಲಿ ಅವರ ಕಲ್ಯಾಣಕ್ಕೆ ಸಂಬಂಧಿಸಿದ ಇನ್ನಷ್ಟು ಸೌಲಭ್ಯಗಳನ್ನು ಒದಗಿಸುವ ಭರವಸೆ ನೀಡಿದರು.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಮಚಂದ್ರ ಎಂ ಮಾತನಾಡಿ, ಸ್ವಚ್ಛತಾ ಕಾರ್ಮಿಕರ ಕೆಲಸಕ್ಕೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದು ಪಂಚಾಯಿತಿಯ ಕರ್ತವ್ಯವಾಗಿದ್ದು, ಸೈಕಲ್ ವಿತರಣೆಯಿಂದ ಕೆಲಸ ಸುಗಮವಾಗಲಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು, ಸಿಬ್ಬಂದಿ ವರ್ಗದವರು ಹಾಗೂ ಸ್ವಚ್ಛತಾ ಕಾರ್ಮಿಕರು ಉಪಸ್ಥಿತರಿದ್ದು, ಸೈಕಲ್ ವಿತರಣೆ ಕಾರ್ಯಕ್ರಮವನ್ನು ಸಾರ್ಥಕಗೊಳಿಸಿದರು.
About The Author
Discover more from JANADHWANI NEWS
Subscribe to get the latest posts sent to your email.