
ಹಾಸನ ಮೇ.3 ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಜಿಲ್ಲಾಧಿಕಾರಿ ಸತ್ಯಭಾಮ ಅವರು ಅಭಿನಂದಿಸಿದ್ದಾರೆ.
625 ಕ್ಕೆ. 625 ಅಂಕಗಳಿಸಿ ರಾಜ್ಯದಲ್ಲಿ ಮೊದಲ ಸ್ಥಾನ ಪಡೆದ ಉತ್ಸವ್ ಪಟೇಲ್, 624 ಅಂಕಗಳನ್ನು ಗಳಿಸಿ ರಾಜ್ಯದಲ್ಲಿ ದ್ವಿತೀಯ ಸ್ಥಾನ ಪಡೆದಿರುವ ,ಡಿ.ಪಿ.ಚೇತನ್ ಮತ್ತು ಕಿರಣ್ ಗೌಡ ಹಾಗೂ 623 ಅಂಕಗಳನ್ನು ಗಳಿಸಿ ರಾಜ್ಯದಲ್ಲಿ ತೃತೀಯ ಸ್ಥಾನ ಪಡೆದಿರುವ ಹೇಮಾ ಶ್ರೀ ಇವರನ್ನು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ಅಭಿನಂದಿಸಿ ಮಾತನಾಡಿದ ಅವರು ಮುಂದೆ ಉತ್ತಮ ವಿದ್ಯಾಭ್ಯಾಸ ಮಾಡಿ ಸಮಾಜಕ್ಕೆ ಸೇವೆ ನೀಡಿ ಎಂದು ಶುಭ ಹಾರೈಸಿದರು.
ತಂದೆ ತಾಯಿಗಳು ಕಣ್ಣಿಗೆ ಕಾಣುವ ದೇವರು ಅವರನ್ನು ಪ್ರೀತಿಯಿಂದ ನೋಡಿಕೊಳ್ಳಿ ಎಂದು ಕಿವಿಮಾತು ಹೇಳಿದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಪೋಷಕರು ಹಾಗೂ ಶಾಲಾ ಶಿಕ್ಷಕರು ಹಾಜರಿದ್ದರು.
–
About The Author
Discover more from JANADHWANI NEWS
Subscribe to get the latest posts sent to your email.