
ಹೊಸದುರ್ಗ ಜುಲೈ.03:ಹೊಸದುರ್ಗದ ಬೆಲಗೂರಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ಥಾಪಿಸಿರುವ ಆಶಾ ಕಿರಣ ಶಾಶ್ವತ ದೃಷ್ಟಿ ಕೇಂದ್ರವನ್ನು ತಾಲೂಕು ಆರೋಗ್ಯಾಧಿಕಾರಿ ಹಾಗೂ ಮಕ್ಕಳ ತಜ್ಞ ಡಾ.ರಾಘವೇಂದ್ರ ಪ್ರಸಾದ್ ಗುರುವಾರ ಉದ್ಘಾಟಿಸಿದರು. ಇದೇ ವೇಳೆ ಹಮ್ಮಿಕೊಳ್ಳಲಾದ ವಿಶ್ವ ತಂಬಾಕು ರಹಿತ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಂಬಾಕು ಬಳಕೆಯಿಂದ ಉಂಟಾಗುವ ಹಾನಿಯ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿ ತಂಬಾಕು ತ್ಯಜಿಸಲು ಸಲಹೆ ನೀಡಿದರು. ಈ ಸಂದರ್ಭದಲ್ಲಿ ದಂತ ವೈದ್ಯಾಧಿಕಾರಿ ಡಾ. ಸುಮಾ ಮತ್ತು ಡಾ. ಹರ್ಷ, ಬೆಲಗೂರು ಸಮುದಾಯ ಆರೋಗ್ಯ ಕೇಂದ್ರ ಹಾಗೂ ಬಲ್ಲಾಳಸಮುದ್ರದ ಪ್ರಾಥಮಿಕ ಆರೋಗ್ಯ ಕೇಂದ್ರ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.
About The Author
Discover more from JANADHWANI NEWS
Subscribe to get the latest posts sent to your email.