
ನಾಯಕನಹಟ್ಟಿ : ಈದ್ ಮಿಲಾದ್ ಹಾಗೂ ಗಣೇಶ್ ವಿಸರ್ಜನೆ ಮೆರವಣಿಗೆ ಹಿನ್ನಲೆ ಪಟ್ಟಣದಲ್ಲಿ ಕಾನೂನು & ಸುವ್ಯವಸ್ಥೆ ಶಾಂತಿ ಸೌಹಾರ್ದಾತೆ ಕಾಪಾಡುವ ನಿಟ್ಟಿನಲ್ಲಿ ಬುಧವಾರ ಪೊಲೀಸ್ ಪಥಸಂಚಲನ ನಡೆಸಲಾಯಿತು.
ಪಟ್ಟಣದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ದೃಷ್ಟಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಪಥಸಂಚಲನ ನಡೆಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಭಂಡಾರು, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ್, ಚಳ್ಳಕೆರೆ ಉಪ ವಿಭಾಗದ ಡಿವೈಎಸ್ಪಿ ರಾಜಣ್ಣ, ತಳಕು ವೃತ್ತ ನಿರೀಕ್ಷಕ ಹನುಮಂತಪ್ಪ ಎಂ ಶಿರೇಹಳ್ಳಿ , ನಾಯಕನಹಟ್ಟಿ ಪೊಲೀಸ್ ಠಾಣೆಯ ಉಪನಿರೀಕ್ಷಕ ಪಾಂಡುರಂಗಪ್ಪ ಹಾಗೂ ಸಿಬ್ಬಂದಿ ವರ್ಗದವರು ಭಾಗಿಯಾಗಿದ್ದರು.
About The Author
Discover more from JANADHWANI NEWS
Subscribe to get the latest posts sent to your email.