ನಾಯಕನಹಟ್ಟಿ::
ಗೌಡಗೆರೆ ಗ್ರಾ.ಪಂ. ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಟಿ ರಂಗಪ್ಪ. ಭಾರತ ರತ್ನ ಡಾ ಬಿ ಆರ್ ಅಂಬೇಡ್ಕರ್ ಅವರ ನಾಮಫಲಕ ಅನಾವರಣಗೊಳಿಸಿ ಮಾತನಾಡಿದರು ಗ್ರಾಮದಲ್ಲಿ ಪ್ರತಿಯೊಬ್ಬರು ಆರ್ಥಿಕವಾಗಿ ಶೈಕ್ಷಣಿಕವಾಗಿ ಮುಖ್ಯ ವಾಹಿನಿಗೆ ಬರಲು ಉತ್ತಮ ಶಿಕ್ಷಣವನ್ನು ಪಡೆಯಬೇಕು ಎಂದು ಗೌಡಗೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಟಿ ರಂಗಪ್ಪ ಹೇಳಿದರು.









ಶುಕ್ರವಾರ ನಾಯಕನಹಟ್ಟಿ ಸಮೀಪದ ಗೌಡಗೆರೆ ಗ್ರಾಮದ ಮಾದಿಗರ ಕಾಲೋನಿಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ನಾಮಫಲಕ ನವರನ್ನುಗೊಳಿಸಿ ಮಾತನಾಡಿದರು
ಗ್ರಾಮದ ಮುಖಂಡ ಸಿ ಮಂಜುನಾಥ್ ಮಾತನಾಡಿದರು ಡಾಕ್ಟರ್ ಬಿಆರ್ ಅಂಬೇಡ್ಕರ್ ಇಡೀ ವಿಶ್ವವೇ ಅವರನ್ನು ಸ್ಮರಿಸುವ ಕೆಲಸವಾಗಬೇಕು ಒಂದು ಸಮುದಾಯಕ್ಕೆ ಮಾತ್ರ ಡಾಕ್ಟರ್ ಬಿಆರ್ ಅಂಬೇಡ್ಕರ್ ಅವರು ಸೀಮಿತವಲ್ಲ ವಿಶ್ವ ನಾಯಕ ಇಡೀ ವಿಶ್ವವೇ ಮೆಚ್ಚುವಂತ ಸಂವಿಧಾನವನ್ನು ನೀಡಿ ನಮ್ಮೆಲ್ಲರಿಗೂ ಉತ್ತಮ ಭವಿಷ್ಯವನ್ನು ನೀಡಿದ್ದಾರೆ ಅವರ ತತ್ವ ಆದರ್ಶಗಳನ್ನು ಪ್ರತಿಯೊಬ್ಬರು ಮೈಗೂಡಿಸಿಕೊಳ್ಳಬೇಕು ಎಂದರು.
ಇನ್ನು ಇದೆ ವೇಳೆ ಗ್ರಾಮ ಪಂಚಾಯತಿ ಸದಸ್ಯ ಗಿಣಿಯರ್ ತಿಪ್ಪೇಶ್ ಮಾತನಾಡಿದರು.
ಈ ಸಂದರ್ಭದಲ್ಲಿ ಒಬಿಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ ಟಿ ತಿಪ್ಪೇಸ್ವಾಮಿ, ಸಿ.ಟಿ. ತಿಪ್ಪೇಸ್ವಾಮಿ, ಮಹಾಂತೇಶ್, ತಿಪ್ಪೇಸ್ವಾಮಿ, ಜಯಣ್ಣ, ಅರ್ಜುನ್, ಜಗದೀಶ್, ಹಟ್ಟಿಯ ಯಜಮಾನರು ಹಾಗೂ ಹಟ್ಟಿಯ ಮುಖಂಡರಾದ ರಾಜು, ದುರುಗಪ್ಪ, ಯುವಕರು ಮಹಿಳೆಯರು ಸೇರಿದಂತೆ ಸಮಸ್ತ ಗೌಡಗೆರೆ ಗ್ರಾಮಸ್ಥರು ಇದ್ದರು
About The Author
Discover more from JANADHWANI NEWS
Subscribe to get the latest posts sent to your email.