January 29, 2026
IMG-20251103-WA0274.jpg

ವರದಿ: ಕೆ.ಟಿ. ಓಬಳೇಶ್ ನಲಗೇತನಹಟ್ಟಿ.

ನಾಯಕನಹಟ್ಟಿ:- ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಾಯಕನಹಟ್ಟಿ ಪಟ್ಟಣದಲ್ಲಿ ಉಪವಾಸ ಸತ್ಯಾಗ್ರಹ ನಡೆಯಿತು.

ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ನಾಯಕನಹಟ್ಟಿ ಹೋಬಳಿ ಘಟಕದ ವಾಸುದೇವ (ಮೇಟಿ ಬಣ)ಜಿಲ್ಲಾ ಸಮಿತಿ ಮತ್ತು ರಾಜ್ಯ ಸಮಿತಿ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ಸೇನೆ ತಾಲೂಕು ಹಾಗೂ ಹೋಬಳಿ ಘಟಕದಿಂದ ಉಪವಾಸ ಸತ್ಯಾಗ್ರಹ ನಡೆಯಿತು.

ಸತ್ಯಾಗ್ರಹದ ಅಂಗವಾಗಿ ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನದಲ್ಲಿ ಸೋಮವಾರ ಬೆಳಿಗ್ಗೆ 10ಗಂಟೆಗೆ ವಿಶೇಷ ಪೂಜೆ ಸಲ್ಲಿಸಿದ ಹೋರಾಟಗಾರರು ನಾಯಕನಹಟ್ಟಿ ಪಟ್ಟಣದ ಪ್ರಮುಖ ರಸ್ತೆಯಲ್ಲಿ ಎತ್ತಿನ ಗಾಡಿಯಲ್ಲಿ ಪ್ರತಿಭಟನೆ ಮೂಲಕ ಆಗಮಿಸಿ ಗಮನ ಸೆಳೆದರು.

ನಾಯಕನಹಟ್ಟಿ ಪಟ್ಟಣದಲ್ಲಿ ಸರ್ಕಾರಿ ಬಸ್ ನಿಲ್ದಾಣ, ಸರ್ಕಾರಿ ಪದವಿ ಪೂರ್ವ ಕಾಲೇಜು, ಕರ್ನಾಟಕ ಪಬ್ಲಿಕ್ ಶಾಲೆ, ಸರ್ಕಾರಿ ಪ್ರೌಢಶಾಲೆ, ಸರ್ಕಾರಿ ಐಟಿಐ ಕಾಲೇಜು, ಅಗ್ನಿಶಾಮಕ ಠಾಣೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳು ಆಗಬೇಕು ಮತ್ತು ನಾಯಕನಹಟ್ಟಿ ಪಟ್ಟಣಕ್ಕೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು.ಇಲ್ಲಿನ ವಿದ್ಯಾರ್ಥಿಗಳಿಗೆ ಬೇರಡೆ ಶಾಲಾ ಕಾಲೇಜುಗಳಿಗೆ ಹೋಗಲು ಸಕಾಲದಲ್ಲಿ ಬಸ್ಗಳ ವ್ಯವಸ್ಥೆ ಕಲ್ಪಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಮಿತಿಯ ಜಿಲ್ಲಾಧ್ಯಕ್ಷರಾದ ಲಕ್ಷ್ಮಿಕಾಂತ್, ಹೋಬಳಿ ಘಟಕದ ಅಧ್ಯಕ್ಷರಾದ ನಾಗರಾಜ್ ಮೀಸೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನವೀನ್, ನಗರ ಘಟಕ ಉಪಾಧ್ಯಕ್ಷ ಸಿ.ಎಸ್. ರಾಘವೇಂದ್ರ, ಕರವೇ ಕನ್ನಡ ಸೇನೆ ತಾಲೂಕು ಅಧ್ಯಕ್ಷ ಪಿ. ಮುತ್ತಯ್ಯ ಜಾಗನೂರಹಟ್ಟಿ, ಹೋಬಳಿ ಅಧ್ಯಕ್ಷ ಕೆ ಜಿ ಮಂಜುನಾಥ್ ಜೋಗಿಹಟ್ಟಿ, ತಿಪ್ಪೇಸ್ವಾಮಿ, ಅನುಸೂಯಮ್ಮ, ತಿಪ್ಪಮ್ಮ ನಾಗರಾಜ್, ಅರುಣ, ಸತೀಶ್, ಪುನೀತ್, ಪ್ರಸನ್ನ, ರೈತಪರ ಸಂಘಟನೆಯ ಸಮಿತಿಯ ಸೇರಿದಂತೆ ಹಲವರಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading