January 29, 2026
IMG-20260104-WA0146.jpg

ಚಳ್ಳಕೆರೆ:
ಚಳ್ಳಕೆರೆ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಪದವೀಧರ ವಿಭಾಗದ ಅಧ್ಯಕ್ಷರಾಗಿ ಪಿ.ಮಹದೇವಪುರ ಗ್ರಾಮದ ಎಂ.ಎನ್.ಮಧುಕುಮಾರ್ ಅವರನ್ನು ಶಾಸಕರಾದ ಟಿ.ರಘುಮೂರ್ತಿ ಯವರ ಅನುಮೋದನೆ ಮೇರೆಗೆ ಆಯ್ಕೆ ಮಾಡಲಾಗಿದೆ. ಜೊತೆಗೆ ಮುಂಬರುವ ಪದವೀಧರ ವಿಧಾನ ಪರಿಷತ್ ಚುನಾವಣೆಗೆ ಚಳ್ಳಕೆರೆ ತಾಲ್ಲೂಕಿನ ಉಸ್ತುವಾರಿಯಾಗಿ ಕೂಡ ಅವರನ್ನು ನೇಮಕ ಮಾಡಲಾಗಿದೆ.

ಈ ಕುರಿತು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ರಾಮ ನಾಯಕ್ ಮಾಹಿತಿ ನೀಡಿದ್ದು, ಪಕ್ಷ ಸಂಘಟನೆಯಲ್ಲಿ ಮಧುಕುಮಾರ್ ಅವರ ಅನುಭವ ಹಾಗೂ ಕಾರ್ಯಕ್ಷಮತೆಯನ್ನು ಪರಿಗಣಿಸಿ ಈ ಜವಾಬ್ದಾರಿ ವಹಿಸಲಾಗಿದೆ ಎಂದರು. ಮುಂಬರುವ ಚುನಾವಣೆಯಲ್ಲಿ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಅವರು ಸಕ್ರಿಯವಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading