July 12, 2025
1751629531362.jpg


ಬೊಬ್ಬೂರು ಜುಲೈ04:
ಹೆಚ್ಚಿನ ಇಳುವರಿ ಹಾಗೂ ಗುಣಮಟ್ಟದ ಈರುಳ್ಳಿ ಉತ್ಪಾದನೆ ಪಡೆಯಲು ರೈತರು ಸೂಕ್ತ ತಳಿಯ ಆಯ್ಕೆ, ಮಣ್ಣು ಮಾದರಿ ಆಧಾರಿತ ಪೋಷಕಾಂಶಗಳ ನಿರ್ವಹಣೆ ಹಾಗೂ ಹೆಚ್ಚಿನ ಸಾವಯವ ಗೊಬ್ಬರ ಬಳಸುವುದು ಸೂಕ್ತ ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಮುಖ್ಯಸ್ಥ ಆರ್.ರಜನೀಕಾಂತ ಹೇಳಿದರು.
ಹಿರಿಯೂರು ತಾಲ್ಲೂಕಿನ ಬಬ್ಬೂರುಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಗುರುವಾರ ಜಿಲ್ಲೆಯ ರೈತರಿಗೆ “ಸುಧಾರಿತ ಈರುಳ್ಳಿ ಬೆಳೆಯ ಉತ್ಪಾದನಾ ತಾಂತ್ರಿಕತೆಗಳ” ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಚಿತ್ರದುರ್ಗ ಜಿಲ್ಲೆಯಲ್ಲಿ ಈರುಳ್ಳಿ ಬೆಳೆಯು ಮುಂಗಾರು ಹಂಗಾಮಿನಲ್ಲಿ ಬೆಳೆಯುವ ಪ್ರಮುಖ ತರಕಾರಿ ಬೆಳೆಯಾಗಿದ್ದು, ಮುಖ್ಯವಾಗಿ ಚಿತ್ರದುರ್ಗ, ಹಿರಿಯೂರು ಮತ್ತು ಚಳ್ಳಕೆರೆ ತಾಲ್ಲೂಕಿನಲ್ಲಿ ಹೆಚ್ಚಾಗಿ ಬೆಳೆಯುತ್ತಿದ್ದು ಸದರಿ ಬೆಳೆಯಲ್ಲಿ ಹೆಚ್ಚಿನ ಇಳುವರಿ ಪಡೆಯಲು ಅನುಸರಿಸಬೇಕಾದ ಬೇಸಾಯ ಕ್ರಮಗಳು ಹಾಗೂ ಕೀಟ ಮತ್ತು ರೋಗ ನಿರ್ವಹಣೆ ಕುರಿತ ತಾಂತ್ರಿಕ ಮಾಹಿತಿಯ ಸದುಪಯೋಗ ಪಡೆದುಕೊಳ್ಳಲು ಮನವಿ ಮಾಡಿದರು.
ಹಿರಿಯೂರು ತೋಟಗಾರಿಕೆ ಮಹಾವಿದ್ಯಾಲಯದ ತರಕಾರಿ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಪ್ರಕಾಶ್ ಕೆರೂರೆ ಮಾತನಾಡಿ, ಈರುಳ್ಳಿ ಬೆಳೆಗೆ ಜೂನ್ ಮತ್ತು ಜುಲೈ ತಿಂಗಳು ಬಿತ್ತನೆಗೆ ಸೂಕ್ತವಾಗಿದ್ದು, ಈರುಳ್ಳಿ ಬೆಳೆಯ ವಿವಿಧ ತಳಿಗಳು, ರಸಗೊಬ್ಬರದ ಪ್ರಮಾಣ, ಬಿತ್ತನೆ ಬೀಜ ಬಳಸುವ ಪ್ರಮಾಣ, ಬೀಜೋಪಚಾರದ ಪ್ರಾಮುಖ್ಯತೆ, ಬೆಳೆಯಲ್ಲಿ ಸಸಿ ಮಡಿ ಮಾಡುವ ವಿಧಾನ, ಕಳೆ ನಿರ್ವಹಣೆ ಮತ್ತು ನೀರು ನಿರ್ವಹಣೆ ಕುರಿತು ಮಹಿತಿ ನೀಡಿದರು.
ತದನಂತರ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದ ತಾಕಿಗೆ ಭೇಟಿ ನೀಡಿ ಈರುಳ್ಳಿ ಬೆಳೆಯ ವಿವಿಧ ತಳಿಗಳ ಪ್ರಯೋಗದ ಪ್ರಾತ್ಯಕ್ಷಿಕೆ ತಾಕಿಗೆ ಮತ್ತು ಸಂಶೋಧನಾ ಕೇಂದ್ರದ ಮುಖ್ಯಸ್ಥ ಡಾ. ಶರಣಪ್ಪ ಜಂಗಂಡಿಯವರು ಹೊಸದಾಗಿ ತಯಾರಿಸಿದ ಈರುಳ್ಳಿಯ ಮೇಲಿನ ಜುಟ್ಟು ಕತ್ತರಿಸುವ ಯಂತ್ರದ ಕುರಿತು ಮಾಹಿತಿ ನೀಡಿದರು.
ಬಬ್ಬೂರು ಕೃಷಿ ವಿಜ್ಞಾನ ಕೇಂದ್ರದ ಕೀಟಶಾಸ್ತ್ರಜ್ಞ ಡಾ.ಟಿ.ರುದ್ರಮುನಿ ಅವರು, ಈರುಳ್ಳಿ ಬೆಳೆಯಲ್ಲಿ ಬರುವ ಪ್ರಮುಖ ಕೀಟಗಳಾದ ಥ್ರೀಪ್ಸ್, ನುಸಿ, ತಂಬಾಕಿನ ಹುಳು ಹಾಗೂ ಪ್ರಮುಖ ರೋಗಗಳಾದ ನೇರಳೆ ಮಚ್ಚೆ ರೋಗ, ದುಂಡಾಣು ಗೆಡ್ಡೆಕೊಳೆ ರೋಗಗಳಸಮಗ್ರ ನಿರ್ವಹಣೆ ಕ್ರಮಗಳು ಕುರಿತು ಮಾಹಿತಿ ನೀಡಿದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading