September 16, 2025
FB_IMG_1733276560311.jpg


ಹಿರಿಯೂರು :
ಹಿರಿಯೂರು ನಗರಸಭೆ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡಲು ವ್ಯಾಪಾರಿಗಳು ಪ್ರತ್ಯೇಕವಾಗಿ ಪರವಾನಿಗೆ ಪಡೆಯುವುದು ಕಡ್ಡಾಯವಾಗಿದೆ ಎಂಬುದಾಗಿ ನಗರಸಭೆಯ ಪೌರಾಯುಕ್ತರಾದ ಎ.ವಾಸೀಂರವರು ವ್ಯಾಪಾರಸ್ಥರಿಗೆ ಸೂಚನೆ ನೀಡಿದ್ದಾರೆ.
ನಗರಸಭೆಯಿಂದ ಅರ್ಜಿ ನಮೂನೆ ಪಡೆದು ಅಗತ್ಯ ಮಾಹಿತಿಗಳೊಂದಿಗೆ ಅರ್ಜಿ ಶುಲ್ಕ 500 ರೂ.ಕಟ್ಟಿ ಅರ್ಜಿ ಸಲ್ಲಿಸಬಹುದಾಗಿದ್ದು, ಇದು ಒಂದು ವರ್ಷ ಮಾತ್ರವೇ ಚಾಲ್ತಿಯಲ್ಲಿರುತ್ತದೆ. ವ್ಯಾಪಾರಸ್ಥರು ಇದೇ ಡಿಸೆಂಬರ್ 15 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್, ಬಾಡಿಗೆ ಕರಾರುಪತ್ರ, ಉದ್ಯಮ ಪರವಾನಿಗೆ, ಉದ್ಯಮ ಫೋಟೋ ಹಾಗೂ ಮಾಲೀಕರ ಫೋಟೋ ಈ ಎಲ್ಲಾ ದಾಖಲೆಗಳನ್ನು ತರಬೇಕು, ಡಿಸೆಂಬರ್ 15ರ ನಂತರ ಪ್ರತ್ಯೇಕ ಪರವಾನಿಗೆಯನ್ನು ಪಡೆಯಬೇಕು ಎಂಬುದಾಗಿ ತಿಳಿಸಿದ್ದಾರೆ.
ಪ್ರತ್ಯೇಕ ಪರವಾನಿಗೆಯನ್ನು ಪಡೆಯದೇ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ತಂಬಾಕು ವ್ಯಾಪಾರಸ್ಥರ ಮೇಲೆ ತಂಡ ವಿಧಿಸುವುದಲ್ಲದೆ ಉದ್ದಿಮೆ ಪರಮಾನಗೆಯನ್ನು ಸಹ ರದ್ದುಪಡಿಸಿ ಶಿಸ್ತುಕ್ರಮವನ್ನು ಕೈಗೊಳ್ಳಲಾಗುವುದು ಎಂಬುದಾಗಿ ಪೌರಾಯುಕ್ತರು ತಿಳಿಸಿದ್ದಾರೆ.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading