September 16, 2025
veerendra11.jpg


ಚಿತ್ರದುರ್ಗ ಡಿ.04:
ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ ಹಾಗೂ ನಗರ ಸಭೆ ಅಧ್ಯಕ್ಷೆ ಸುಮಿತ.ಬಿ.ಎನ್ ಇವರು ಜಂಟಿಯಾಗಿ ನಗರ ಸಭೆಯ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಡಿ.5 ರಂದು ಸಂಜೆ 4 ಗಂಟೆಗೆ ನಗರ ಸಭೆ ಸಭಾಂಗಣದಲ್ಲಿ, ಎಸ್.ಸಿ. ಹಾಗೂ ಎಸ್.ಟಿ. ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸುವರು. ಇದೇ ವೇಳೆ ನಗರ ಸಭೆ ವತಿಯಿಂದ ಹೊಸದಾಗಿ ಖರೀದಿಸಿರುವ ಕಸ ಸಂಗ್ರಹಣ ವಾಹನಗಳನ್ನು ಉದ್ಘಾಟಿಸುವರು. ನಂತರ ಸರ್ಕಾರಿ ಬಾಲಕಿಯರ ಕಾಲೇಜು ಪಕ್ಕದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸುವರು.

ಡಿ.6 ಮತ್ತು ಡಿ.7 ರಂದು ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ಮಂಜೂರಾದ ರೂ.7.50 ಕೋಟಿ ವೆಚ್ಚದಲ್ಲಿ ನಗರದ ವಿವಿಧ ವಾರ್ಡ್ಗಳಲ್ಲಿ ಸಿಸಿ ರಸ್ತೆ, ಒಳಚರಂಡಿ ಸೇರಿದಂತೆ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಕಾಮಗಾರಿಗಳಿಗ ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡುವರು ಎಂದು ಪೌರಾಯುಕ್ತೆ ಎಂ.ರೇಣುಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading