ಹೊಸದುರ್ಗಮಾ.05:
ಹೊಸದುರ್ಗ ತಾಲ್ಲೂಕು ಶ್ರೀರಾಂಪುರ ಹೋಬಳಿ ಶ್ರೀರಾಂಪುರ ಹಾಗೂ ಕುರುಬರಹಳ್ಳಿ ಕಂದಾಯ ವೃತ್ತಕ್ಕೆ ಮತ್ತು ಕಸಬಾ ಹೋಬಳಿ ಹುಣವಿನಡು ಕಂದಾಯ ವೃತ್ತಕ್ಕೆ ಹೆಚ್ಚುವರಿ ಗ್ರಾಮ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಮಾರ್ಚ್ 25 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಅಭ್ಯರ್ಥಿಯು ಅರ್ಜಿ ಸಲ್ಲಿಸಲು ಕಡೆಯ ದಿನಾಂಕದಂದು 25 ವರ್ಷ ಪೂರ್ಣಗೊಂಡಿರಬೇಕು. 45ವರ್ಷ ವಯೋಮಿತಿ ಒಳಗಿರಬೇಕು.. ಎಸ್ಎಸ್ಎಲ್ಸಿ, ವರ್ಗಾವಣೆ ಪ್ರಮಾಣ ಪತ್ರ, ಶಾಲಾ ದಾಖಲಾತಿ ಪ್ರಮಾಣ ಪತ್ರದಲ್ಲಿ ದಾಖಲಿಸಿರುವ ಜನ್ಮ ದಿನಾಂಕವನ್ನು ಮಾತ್ರವೇ ಪರಿಗಣಿಸಲಾಗುವುದು. ಅಭ್ಯರ್ಥಿಯು ಕನ್ನಡ ಓದುವ, ಬರೆಯುವ ಜ್ಞಾನವುಳ್ಳ ಅಕ್ಷರಸ್ಥರಾಗಿರುವ ಬಗ್ಗೆ ಸೂಕ್ತ ದಾಖಲೆಗಳನ್ನು ಸಲ್ಲಿಸಬೇಕು. ಅರ್ಜಿಯನ್ನು ನಿಗಧಿತ ನಮೂನೆ-1ರಲ್ಲಿ ಸಲ್ಲಿಸಬೇಕು. ಗ್ರಾಮ ಸಹಾಯಕ ಹುದ್ದೆಯ ತಾತ್ಕಾಲಿಕ ಹುದ್ದೆಯಾಗಿದ್ದು, ಸರ್ಕಾರದಿಂದ ಕಾಲಕಾಲಕ್ಕೆ ನಿಗಧಿ ಆಗುವಂತಹ ಗೌರವಧನ ಪಾವತಿಸಲಾಗುವುದು.