ಪಾವಗಡ: ಕೇರಳದಲ್ಲಿ ಉಂಟಾಗಿರುವ ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿರುವ ಸಂತ್ರಸ್ತರ ನೆರವಿಗಾಗಿ ಶ್ರೀ ರಾಮಕೃಷ್ಣ ಸೇವಾಶ್ರಮ, ಪಾವಗಡವು ಮತ್ತೊಮ್ಮೆ ಮಾನವೀಯ ಸೇವೆಗೆ ಮುಂದಾಗಿದೆ.
ಇನ್ಫೋಸಿಸ್ ಫೌಂಡೇಷನ್ (Infosys Foundation) ಸಹಕಾರದೊಂದಿಗೆ “ಕೇರಳ ಪ್ರವಾಹ ಪರಿಹಾರ ಯೋಜನೆ–2026” ಅಡಿಯಲ್ಲಿ ಅಗತ್ಯ ನೆರವು ಸಾಮಗ್ರಿಗಳನ್ನು ಸಂತ್ರಸ್ತರಿಗೆ ತಲುಪಿಸುವ ಕಾರ್ಯವನ್ನು ಸೇವಾಶ್ರಮ ಕೈಗೊಂಡಿದೆ.
ಶ್ರೀ ರಾಮಕೃಷ್ಣ ಸೇವಾಶ್ರಮದ ಅಧ್ಯಕ್ಷರಾದ ಪೂಜ್ಯ ಸ್ವಾಮಿ ಜಪಾನಂದಜೀ ಮಹಾರಾಜ್ ಅವರ ಮಾರ್ಗದರ್ಶನದಲ್ಲಿ ಸೇವಾಶ್ರಮದ ತಂಡವು ಪರಿಹಾರ ಕಾರ್ಯಕ್ಕೆ ಮುಂದಾಗಿದ್ದು, ಆಹಾರ ಸಾಮಗ್ರಿ, ಅಗತ್ಯ ವಸ್ತುಗಳು ಹಾಗೂ ಇತರೆ ಪರಿಹಾರ ಸಾಮಗ್ರಿಗಳನ್ನು ಕೇರಳದ ಪ್ರವಾಹ ಪೀಡಿತ ಪ್ರದೇಶಗಳಿಗೆ ತಲುಪಿಸುವ ಸಿದ್ಧತೆ ನಡೆಸಿದೆ.
ಈ ಕುರಿತು ಮಾತನಾಡಿದ ಸೇವಾಶ್ರಮದ ಪ್ರತಿನಿಧಿಗಳು, ಸಂಕಷ್ಟದ ಸಮಯದಲ್ಲಿ ಮಾನವೀಯ ಸೇವೆಯೇ ನಿಜವಾದ ಧರ್ಮವಾಗಿದ್ದು, ಸಮಾಜದ ಸಹೃದಯರು ಸಹ ಸಾಧ್ಯವಾದಷ್ಟು ನೆರವು ನೀಡುವ ಮೂಲಕ ಸಂತ್ರಸ್ತರ ಸಂಕಷ್ಟ ನಿವಾರಣೆಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ಪ್ರವಾಹ ಸಂತ್ರಸ್ತರ ನೆರವಿಗಾಗಿ ಸೇವಾಶ್ರಮ ಕೈಗೊಂಡಿರುವ ಈ ಕಾರ್ಯಕ್ಕೆ ಸಾರ್ವಜನಿಕ ವಲಯದಿಂದ ಮೆಚ್ಚುಗೆ ವ್ಯಕ್ತವಾಗಿದ್ದು, ಅಗತ್ಯವಿರುವವರಿಗೆ ತ್ವರಿತವಾಗಿ ನೆರವು ತಲುಪಿಸುವ ಉದ್ದೇಶದಿಂದ ತಂಡ ಕಾರ್ಯನಿರ್ವಹಿಸುತ್ತಿದೆ.






About The Author
Discover more from JANADHWANI NEWS
Subscribe to get the latest posts sent to your email.