ಹಿರಿಯೂರು :
ನಗರದ ಲಕ್ಷ್ಮಮ್ಮ ಬಡಾವಣೆಯ ಮೂರನೇ ತಿರುವಿನಲ್ಲಿ ಮಂಗಳವಾರ ಸಂಜೆ ವಿದ್ಯುತ್ ಟ್ರಾನ್ಸ್ಫಾರ್ಮರ್ ಸುಟ್ಟು ಹೋಗಿದ್ದು, ಈಭಾಗದ ಸುಮಾರು 20ಕ್ಕೂ ಹೆಚ್ಚು ಮನೆಗಳಲ್ಲಿ ಟಿವಿಗಳು, ಫ್ರಿಡ್ಜ್, ಮೊಬೈಲ್ ಗಳು ಸೇರಿದಂತೆ ಅನೇಕ ಎಲೆಕ್ಟ್ರಾನಿಕ್ ಉಪಕರಣಗಳು ಸುಟ್ಟು ಹೋಗಿದ್ದು, ನಾಗರೀಕರಿಗೆ ಲಕ್ಷಗಟ್ಟಲೆ ನಷ್ಟವಾಗಿದೆ ಎಂಬುದಾಗಿ ಅಲ್ಲಿನ ಬಡಾವಣೆಯ ನಿವಾಸಿಗಳು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಈ ನಷ್ಟಕ್ಕೆ ಬೆಸ್ಕಾಂ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣವಾಗಿದ್ದು, ಸಂಬಂಧಪಟ್ಟ ಬೆಸ್ಕಾಂ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿ, ಬೆಸ್ಕಾಂ ಇಲಾಖೆಯಿಂದ ಬಡಾವಣೆ ನಿವಾಸಿಗಳಿಗೆ ಸೂಕ್ತ ಪರಿಹಾರ ನೀಡಬೇಕು, ಇಲ್ಲವಾದಲ್ಲಿ ಬಡಾವಣೆ ನಿವಾಸಿಗಳ ನೇತೃತ್ವದಲ್ಲಿ ಬೆಸ್ಕಾಂ ಇಲಾಖೆ ವಿರುದ್ಧ ಬೃಹತ್ ಚಳುವಳಿ ಹಮ್ಮಿಕೊಳ್ಳಲಾಗುವುದು ಎಂಬುದಾಗಿ ಲಕ್ಷ್ಮಮ್ಮ ಬಡಾವಣೆಯ ನಿವಾಸಿಗಳು ಪತ್ರಿಕಾ ಮಾಧ್ಯಮಗಳಿಗೆ ತಿಳಿಸಿದ್ದಾರೆ.




About The Author
Discover more from JANADHWANI NEWS
Subscribe to get the latest posts sent to your email.