ಹಿರಿಯೂರು :
ಶಿಕ್ಷಣವೇ ಶಕ್ತಿ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆಯುವ ಮೂಲಕ ಈ ದೇಶದ ಸತ್ಪ್ರಜೆಗಳಾಗಿ ಹೊರಹೊಮ್ಮಬೇಕು ಎಂಬುದಾಗಿ ಬೆಂಗಳೂರಿನ ದಯಾನಂದ ಸಾಗರ್ ಇಂಜಿನಿಯರಿಂಗ್ ಕಾಲೇಜಿನ ಗಣಿತಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರು ಹಾಗೂ ಚಿನ್ನದ ಪದಕ ಪುರಸ್ಕೃತರಾದ ಡಾ. ಎಂ. ಆರ್ . ಅಮೃತ ಲಕ್ಷ್ಮಿ ಹೇಳಿದರು.
ತಾಲ್ಲೂಕಿನ ಉಡುವಳ್ಳಿ ಜವಾಹರ್ ನವೋದಯ ವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಪಠ್ಯಚಟುವಟಿಕೆಗಳ ಜೊತೆಜೊತೆಗೆ ತಮಗೆ ಇಷ್ಟವಾದ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲೂ ಸಹ ಭಾಗವಹಿಸುವ ಮೂಲಕ ಸೃಜನಶೀಲತೆಯನ್ನು ಬೆಳೆಸಿಕೊಳ್ಳಬೇಕು, ಈ ನಿಟ್ಟಿನಲ್ಲಿ ಶಿಕ್ಷಕರ ಮಾರ್ಗದರ್ಶವನ್ನು ಪಡೆಯಬೇಕು ಎಂಬುದಾಗಿ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಪರೀಕ್ಷೆಗಳ ಬಗ್ಗೆ ಭಯಪಡದೆ ಪರೀಕ್ಷೆಗಳನ್ನು ಹಬ್ಬದ ಹಾಗೆ ಸಂಭ್ರಮಿಸಬೇಕು, ಪರೀಕ್ಷೆಗಳಲ್ಲಿ ಚೆನ್ನಾಗಿ ಬರೆದು ಉತ್ತಮ ಅಂಕಗಳನ್ನು ಪಡೆಯಬೇಕು, ಪ್ರಶ್ನೆ ಪತ್ರಿಕೆಗಳನ್ನು ಸರಿಯಾದ ಓದಿಕೊಂಡು ಕೊಟ್ಟಿರುವ ಅವಧಿಯಲ್ಲಿಯೇ ಉತ್ತರ ಬರೆಯಬೇಕು, ಆಗ ಸಾಕಷ್ಟು ಹೆಚ್ಚಿನ ಅಂಕಗಳನ್ನು ಪಡೆಯಬಹುದು ಎಂದರು.
ಈ ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಡ್ಯಾನಿಯಲ್ ರತ್ನಕುಮಾರ್, ಪ್ರಭಾರೆ ಪ್ರಾಂಶುಪಾಲರಾದ ಆಂಟೋನಿ ಸ್ಟಾನ್ಲಿ, ಆಂಗ್ಲ ಭಾಷಾ ಶಿಕ್ಷಕಿ ಲಲಿತ ಹಾಗೂ ವಿಜ್ಞಾನ ಶಿಕ್ಷಕಿ ಶರ್ಮಿಳ ಸೇರಿದಂತೆ ಶಿಕ್ಷಕ-ಶಿಕ್ಷಕಿಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಆರಂಭದಲ್ಲಿ ಕುಮಾರಿ ವಿಶೃತ ಸ್ವಾಗತಿಸಿದರು, ಕುಮಾರಿ ಗಾನವಿ ವಂದಿಸಿದರು.
About The Author
Discover more from JANADHWANI NEWS
Subscribe to get the latest posts sent to your email.