ವರದಿ: ಕೆ.ಟಿ.ಮೋಹನ್ ಕುಮಾರ್
ಸಾಲಿಗ್ರಾಮ (ಮೈಸೂರು ಜಿಲ್ಲೆ): ಪೋಷಕರುಗಳು ತಮ್ಮ ಮಕ್ಕಳಿಗ ಶ್ರದ್ಧೆ, ಭಕ್ತಿ, ವಿನಯವನ್ನು ಕಲಿಸಬೇಕು ಎಂದು
ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್.ಕೆ.ಮಧುಚಂದ್ರ ಹೇಳಿದರು
ಅವರು ಪಟ್ಟಣದ ಶ್ರೀ ಭೈರವೇಶ್ವರ ಇಂಟರ್ ನ್ಯಾಷನಲ್ ಸ್ಕೂಲ್ ವತಿಯಿಂದ ಆಯೋಜಿಸಿದ್ದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


ಪೋಷಕರುಗಳು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸುತ್ತವೆ ಶಿಕ್ಷಕರು ಕಲಿಸುತ್ತಾರೆ ಎನ್ನದೆ ತಾವುಗಳು ಕೂಡ ಮನೆಯಲ್ಲಿ ಮಕ್ಕಳಿಗೆ ಕಲಿಸುವ ಕೆಲಸಕ್ಕೆ ಒತ್ತು ನೀಡಬೇಕು.
ಶಿಕ್ಷಕರುಗಳು ಶಾಲೆಯಲ್ಲಿ ಮಕ್ಕಳಿಗೆ ಅವರ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಬೇಕು. ಜೊತೆಗೆ ಉತ್ತಮವಾದ ಶಿಕ್ಷಣವನ್ನು ನೀಡಿ ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ಉನ್ನತ ಸ್ಥಾನಮಾನಗಳನ್ನು ಅಲಂಕರಿಸುವಂತೆ ಮಾಡಬೇಕು ಎಂದು ಕರೆ ನೀಡಿದರು.
ಸಿ ಆರ್ ಪಿ ವಸಂತಕುಮಾರ್ ಬಹುಮಾನಗಳನ್ನು ವಿತರಿಸಿ ಮಾತನಾಡಿ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಶಿಕ್ಷಕರು ಹಾಗೂ ಪೋಷಕರುಗಳು ಹೆಚ್ಚಿನ ಗಮನವನ್ನು ಹರಿಸಬೇಕು ಇಂತಹ ಕಾರ್ಯಕ್ಕಾಗಿ ಸರ್ಕಾರವು ಕೂಡ ಹಲವು ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸುತ್ತಿದೆ ಅದನ್ನು ಸದುಪಯೋಗಪಡಿಸಿಕೊಳ್ಳಬೇಕು. ಆ ಮೂಲಕ ಮಕ್ಕಳನ್ನು ಪರಿಪೂರ್ಣ ವ್ಯಕ್ತಿಗಳನ್ನಾಗಿ ರೂಪಿಸಬೇಕು ಎಂದರು.
ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್.ಆರ್.ಪ್ರಕಾಶ್ ಮಾತನಾಡಿ ಗ್ರಾಮೀಣ ಪ್ರದೇಶದಲ್ಲಿ ಒಂದು ವಿದ್ಯಾ ಸಂಸ್ಥೆಯನ್ನು ಸ್ಥಾಪಿಸುವುದು, ಅದನ್ನು ಕಟ್ಟಿ ಬೆಳೆಸುವುದು ಕಷ್ಟದ ಕೆಲಸವಾಗಿದ್ದು ಅಂತಹ ಪರಿಸ್ಥಿತಿಯಲ್ಲಿಯೂ ಶ್ರೀ ಭೈರವೇಶ್ವರ ಇಂಟರ್ನ್ಯಾಷನಲ್ ಸ್ಕೂಲ್ ಅನ್ನು ಸ್ಥಾಪಿಸಿ ಈ ಭಾಗದ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಕೊಡಿಸುವ ಕೆಲಸವನ್ನು ಮಾಡುತ್ತಿರುವ ಆಡಳಿತ ಮಂಡಳಿಯ ಕಾರ್ಯ ಶ್ಲಾಘನೀಯವಾಗಿದೆ ಎಂದರು.
ಪೋಷಕರು ಶಾಲೆಗಳಲ್ಲಿ ನಡೆಸುವ ವಿವಿಧ ಮಾದರಿಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಮೂಲಕ ತಮ್ಮ ಮಕ್ಕಳಿಗೂ ಹೆಚ್ಚಿನ ಉತ್ತೇಜನ ನೀಡಬೇಕು ಎಂದರು.
ಶಾಲೆಯಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರುಗಳಿಗೆ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಣೆ ಮಾಡಲಾಯಿತು.
ಸಮಾರಂಭದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಾಡಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುವರ್ಣ ವೆಂಕಟೇಶ್, ಮಾಜಿ ಅಧ್ಯಕ್ಷೆ ಫಾತಿಮಾ ಉನ್ನಿಸಾ, ಉಪಾಧ್ಯಕ್ಷೆ ಶಶಿಕಲಾ, ಮಾಜಿ ಉಪಾಧ್ಯಕ್ಷೆ ಕುಸುಮಶಿವಕುಮಾರ್, ಸಿ ಆರ್ ಪಿ ಮಹೇಶ್ ನಿವೃತ್ತ ಶಿಕ್ಷಕ ಚಲುವಯ್ಯ, ಸಂಸ್ಥೆಯ ಗೌರವಾಧ್ಯಕ್ಷ ಎಸ್.ಕೆ.ರಮೇಶ್, ಕಾರ್ಯದರ್ಶಿ ತ್ರಿವೇಣಿ, ಸಂಯೋಜಕಿ ಅರ್ಪಿತಸೇನ್, ಮುಖ್ಯ ಶಿಕ್ಷಕಿ ಯಶಸ್ವಿನಿ, ಶಿಕ್ಷಕರಾದ ಮಂಜುನಾಥ್, ಚಾಂದಿನಿ, ರಕ್ಷಿತಾ, ಲಕ್ಷ್ಮಿ, ಅಶ್ವಿನಿ, ಅಫ್ರಿನ್ ತಾಜ್, ಹನಿಫಕೌಸರ್, ಹೀನ ಕೌಸರ್, ಸಾಮಿಯ ಅಂಜುಮ್, ಗೌತಮಿ, ಸಿಬ್ಬಂದಿಗಳು, ಪೋಷಕರುಗಳು, ವಿದ್ಯಾರ್ಥಿಗಳು ಇದ್ದರು.
About The Author
Discover more from JANADHWANI NEWS
Subscribe to get the latest posts sent to your email.