September 15, 2025
CLK-Pratibhatane-06.jpeg

ಚಳ್ಳಕೆರೆ;
ಚಿತ್ರದುರ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆ ನಿರ್ದೇಶಕ ಯುವರಾಜ್ ಅವರನ್ನು ಕೆಲಸದಿಂದ ಅಮಾನತ್ತು ಮಾಡಬೇಕೆಂದು ಆಗ್ರಹಿಸಿ ಮಂಗಳವಾರ ಕರ್ನಾಟಕ ಮಾದಿಗ ಯುವಸೇನೆ ಪದಾಧಿಕಾರಿಗಳು, ಪ್ರತಿಭಟನೆ ನಡೆಸಿ ತಹಸೀಲ್ದಾರ್ ರೇಹಾನ್ ಪಾಷಾ ಅವರಿಗೆ ಮನವಿ ಸಲ್ಲಿಸಿದ್ದಾರೆ.
ತಾಲೂಕು ಕಚೇರಿ ಮುಂಭಾಗದ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಪ್ರತಿಭಟನಾಕಾರರು ಬೃಹತ್ ಮೆರವಣಿಗೆ ಮೂಲಕ ತಾಲೂಕು ಕಚೇರಿಗೆ ಆಗಮಿಸಿ, ಚಿತ್ರದುರ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆ ಬೋಧಕರ ಆಸ್ಪತ್ರೆ ನಿರ್ದೇಶಕ ಯುವರಾಜ್ ಅವರನ್ನು ಕೂಡಲೇ ಕೆಲಸದಿಂದ ಅಮಾನತ್ತು ಮಾಡಬೇಕು. ವೈದ್ಯರ ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆಸಿರುವ ಬಗ್ಗೆ ವೈದ್ಯಕೀಯ ಸಿಐಡಿಯಿಂದ ತನಿಖೆ ನಡೆಸಬೇಕು. ಆಸ್ಪತ್ರೆ ನೇಮಕಾತಿಯಲ್ಲಿ ಕಾನೂನು ಪರಿಪಾಲನೆ ಆಗಿಲ್ಲ. ಹುದ್ದೆ ಆಕಾಂಕ್ಷಿತ ಅಭ್ಯರ್ಥಿಗಳಿಂದ ಲಕ್ಷಾಂತರ ಲಂಚ ಪಡೆದು, ಅವ್ಯವಹಾರವಾಗಿ ನೇಮಕ ಮಾಡಿಕೊಳ್ಳಲಾಗಿದೆ. ಇದರಿಂದ ಅರ್ಹ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ. ಯುವರಾಜ್ ಬಿಜೆಪಿ ಪಕ್ಷದ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದಾರೆ. ಕೂಡಲೇ ಅಮಾನತ್ತು ಮಾಡಬೇಕು. ಸಿಐಡಿ ತನಿಖೆ ನಡೆಸಿ ಶಿಕ್ಷೆಗೆ ಗುರಿಪಡಿಸಬೇಕು. ಸರ್ಕಾರದ ಆದೇಶಗಳನ್ನು ಗಾಳಿಗೆ ತೂರಿ ಅವ್ಯವಹಾರವಾಗಿ ನಡೆದಿರುವ ನೇಮಕಾತಿಯನ್ನು ಕೂಡಲೇ ರದ್ದುಪಡಿಸಬೇಕು. ಹೊಸ ನೇಮಕಾತಿಗೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಸಂಘಟನೆಯ ಜಿಲ್ಲಾಧ್ಯಕ್ಷ ಒ. ರಾಜಣ್ಣ, ತಾಲೂಕು ಅಧ್ಯಕ್ಷ ಕೆ.ಪಿ. ಮೋಹನ್‌ಕುಮಾರ್, ಬೆಳಗೆರೆ ಮೂಡಲ ಗಿರಿಯಪ್ಪ, ವಿ. ಭೂತೇಶ್, ಗುರುಮೂರ್ತಿ, ಸಾಣೀಕೆರೆ ತಿಪ್ಪೇಸ್ವಾಮಿ, ವೆಂಕಟೇಶ್, ಡಿ. ಬಸವರಾಜ್, ರಾಮಾಂಜಿನೇಯ, ತಿಪ್ಪೇಸ್ವಾಮಿ ಮತ್ತಿತರರಿದ್ದರು

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading