ವರದಿ: ಕೆ.ಟಿ.ಓಬಳೇಶ್ ನಲಗೇತನಹಟ್ಟಿ.
ನಾಯಕನಹಟ್ಟಿ::
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆ ಸಮಾಜದ ಎಲ್ಲಾ ವರ್ಗಕ್ಕೂ ಆರ್ಥಿಕ ನೆರವು ನೀಡುವ ಮೂಲಕ ಶಕ್ತಿ ತುಂಬಿದೆ ಎಂದು ವಲಯ ಮೇಲ್ವಿಚಾರಕಿ ಶ್ರೀಮತಿ ಶಶಿಕಲಾ
ಹೇಳಿದರು.







ಭಾನುವಾರ ಸಮೀಪದ ನಾಯಕನಹಟ್ಟಿ ಪಟ್ಟಣ ಪಂಚಾಯತಿ ವ್ಯಾಪ್ತಿಯ ಜಾಗನೂರಹಟ್ಟಿ ಕಾರ್ಯ ಕ್ಷೇತ್ರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ವತಿಯಿಂದ ಮಾದರಿ ಸಂಘ ಹಾಗೂ ದಾಖಲಾತಿ ನಿರ್ವಹಣೆ ಬಗ್ಗೆ ವಾರದ ಸಭೆಯಲ್ಲಿ ಮಾತನಾಡಿದರು.
ಅವರು
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಮಾಜದ ಎಲ್ಲಾ ವರ್ಗಕ್ಕೂ ಆರ್ಥಿಕ ನೆರವು ನೀಡುವ ಮೂಲಕ ಶಕ್ತಿ ತುಂಬಿದೆ. ರೈತರು, ವಿದ್ಯಾರ್ಥಿಗಳು, ಮಹಿಳೆಯರು, ಕೂಲಿಕಾರ್ಮಿಕರು, ಪುರಾತನ ದೇವಸ್ಥಾನಗಳ ಜೀರ್ಣೋದ್ದಾರ ಹಲವಾರು ಪ್ರಗತಿಪರ ಕಾರ್ಯಕ್ರಮಗಳನ್ನು ಜಾರಿಗೆ ತರುವ ಮೂಲಕ ಗ್ರಾಮೀಣ ಪ್ರದೇಶದ ಹೆಣ್ಣು ಮಕ್ಕಳಿಗೆ ಶಕ್ತಿ ತುಂಬಿದೆ
ಎಂದರು.
ಇದೇ ಸಂದರ್ಭದಲ್ಲಿ ಸೇವಾ ಪ್ರತಿನಿಧಿ ಮಹಾಂತಮ್ಮ, ಸಂಘದ ಸದಸ್ಯರಾದ ಮಮತಾ ಸೂರಮ್ಮ ನೀಲಮ್ಮ ಇನ್ನಿತರರು ಇದ್ದರು
About The Author
Discover more from JANADHWANI NEWS
Subscribe to get the latest posts sent to your email.