
ಹಿರಿಯೂರು:
ತಾಲ್ಲೂಕಿನ ಸೊಂಡೆಕೆರೆ ಎ.ಕೆ.ಕಾಲೋನಿ ಗ್ರಾಮಕ್ಕೆ ರಾಜ್ಯದ ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಭೇಟಿ ನೀಡಿ ಗ್ರಾಮದ ಅಭಿವೃದ್ಧಿ ಬಗ್ಗೆ ಚರ್ಚಿಸಿದರು.
ಅಲ್ಲದೆ, ಗ್ರಾಮದ ಸಾರ್ವಜನಿಕರಿಂದ ಅವಹಾಲುಗಳನ್ನು ಸ್ವೀಕರಿಸಿ, ಅವರ ಸಮಸ್ಯೆಗಳಿಗೆ ಶೀಘ್ರದಲ್ಲಿ ಪರಿಹಾರ ಒದಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಕಾಂಗ್ರೆಸ್ ಮುಖಂಡರುಗಳು, ಕಾರ್ಯಕರ್ತರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.


About The Author
Discover more from JANADHWANI NEWS
Subscribe to get the latest posts sent to your email.