ಗಿರೀಶ ತೊಣಚೇನಹಳ್ಳಿ ಅಂತರ್ ರಾಜ್ಯ ಕನ್ನಡ ಪಯಸ್ವಿನಿ 2026ಮತ್ತು ರಾಜ್ಯಮಟ್ಟದ ತ್ಯಾವಣಿಗೆ ಶ್ರೀ ಪ್ರಶಸ್ತಿಗೆ ಆಯ್ಕೆ
ಕನ್ನಡ ಭವನ ಮತ್ತು ಗ್ರಂಥಾಲಯ ಸಂಸ್ಥೆ ಕಾಸರಗೋಡು ವತಿಯಿಂದ ಜನವರಿ 18 ರಂದು ಆಯೋಜನೆ ಮಾಡಿರುವ ಕನ್ನಡ ಭವನ ರಜತ ಸಂಭ್ರಮ ಕಾರ್ಯಕ್ರಮ ನಡೆಯಲಿದ್ದು ಇಲ್ಲಿ ಕನ್ನಡ ನಾಡು ನುಡಿಯ ಸೇವೆಯಲ್ಲಿ ಪಾಲ್ಗೊಂಡು ಅಪಾರ ಸೇವೆ ಸಲ್ಲಿಸಿ ಸಂಘಟಕ ಸಾಹಿತಿಯಾಗಿ ಗುರುತಿಸಿಕೊಂಡು ಹಲವು ಸಂಘ ಸಂಸ್ಥೆಗಳಲ್ಲಿ ಕಾರ್ಯನಿರ್ವಹಣೆ ಮಾಡುವ ಮೂಲಕ ಖ್ಯಾತಿ ಗಳಿಸಿರುವ ಗಿರೀಶ ಎಸ್ ಎಂ ತೊಣಚೇನಹಳ್ಳಿ ಇವರಿಗೆ 2026 ರ ಕನ್ನಡ ಪಯಸ್ವಿನಿ ಅಂತರ್ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಿದ್ದೇವೆ ಎಂದು ಕನ್ನಡ ಭವನ ಸಂಸ್ಥಾಪಕ ಅಧ್ಯಕ್ಷರಾದ ಡಾ. ವಾಮನರಾವ್ ಬೇಕಲ್ ತಿಳಿಸಿದ್ದಾರೆ
ಅದೇ ರೀತಿ ದಾವಣಗೆರೆಯ ಶ್ರೀ ಶಿವಣ್ಣ ಸುಕನ್ಯ ತ್ಯಾವಣಿಗೆ ಸಾಹಿತ್ಯ ಕಲಾಸಂಸ್ಥೆ ವತಿಯಿಂದ ಜನವರಿ 11 ರಂದು ಪುಸ್ತಕ ಲೋಕಾರ್ಪಣೆ ಹಾಗೂ ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ
ಇವರ ಸಾಧನೆಯನ್ನು ಗುರುತಿಸಿ ರಾಜ್ಯಮಟ್ಟದ ತ್ಯಾವಣಿಗೆಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಸಂಸ್ಥೆಯ ಅಧ್ಯಕ್ಷರಾದ ಸುಕನ್ಯ ತ್ಯಾವಣಿಗೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
About The Author
Discover more from JANADHWANI NEWS
Subscribe to get the latest posts sent to your email.