ಜಗಳೂರು:: ಪ್ರತಿಯೊಬ್ಬರೂ ಪರಿಸರವನ್ನು ರಕ್ಷಿಸಬೇಕು ಎಂದು ಎಸ್ ಕೆ ಒ ಎಸ್ ಟಿ ಮೆಮೋರಿಯಲ್ ಶಾಲೆ ಕಾರ್ಯದರ್ಶಿ ಕೆ.ಆರ್. ತಿಪ್ಪೇಸ್ವಾಮಿ ಹೇಳಿದರು.

ಅವರು ಶನಿವಾರ ತಾಲ್ಲೂಕಿನ ಸೊಕ್ಕೆ ಗ್ರಾಮದ ಎಸ್ ಕೆ. ಒ.ಎಸ್ ಟಿ. ಮೆಮೋರಿಯಲ್ ಶಾಲೆಯಲ್ಲಿ ಹಸಿರು ದಿನ ಕಾರ್ಯಕ್ರಮವನ್ನು ಸಸಿಗೆ ನೀರು ಹಾಕಿ ಉದ್ಘಾಟಿಸಿ ಮಾತನಾಡಿದ ಅವರು. ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಿದ್ದು ಭವಿಷ್ಯದ ದೃಷ್ಟಿಯಿಂದ ನಾವು ಅರಣ್ಯ ಸಂರಕ್ಷಣೆಗಾಗಿ ಹೆಚ್ಚು ಹೆಚ್ಚು ಗಿಡ ಮರಗಳನ್ನು ಬೆಳೆಸುವ ಮೂಲಕ ಅರಣ್ಯ ಪ್ರದೇಶವನ್ನು ವೃದ್ಧಿಸುವ ಮೂಲಕ ಪರಿಸರ ರಕ್ಷಣೆಗೆ ಎಲ್ಲರೂ ಮುಂದಾಗಬೇಕು ಆರೋಗ್ಯಕರ ಜೀವನ ಮತ್ತು ಭೂಮಿಯ ಮೇಲಿನ ಜೀವನದ ಅಸ್ವಸ್ಥದಲ್ಲಿ ಪರಿಸರವು ಪ್ರಮುಖ ಪಾತ್ರ ವಹಿಸುತ್ತದೆ ಆದ್ದರಿಂದ ಪ್ರತಿಯೊಬ್ಬ ವ್ಯಕ್ತಿಯೂ ನಮ್ಮ ಪರಿಸರವನ್ನು ಉಳಿಸುವುದು ಮತ್ತು ರಕ್ಷಿಸುವುದು ಮುಖ್ಯವಾಗಿದೆ ಎಂದರು
ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕಿ ವಿಶಾಲಾಕ್ಷಿ, ಶಿಕ್ಷಕಿರಾದ ಎ. ನಾಗರತ್ನ, ವೈ. ಎನ್.ಅನಿತಾ, ಬಿ. ಎಂ.ಶ್ವೇತಾ, ರೇಖಾ ಟಿ. ಎಸ್, ಪ್ರೇಮ್ ಕುಮಾರ್, ನೇತ್ರಾ ಟಿ ಎಂ ,ಚೈತ್ರ ಎಚ್ ಸಿ, ಅನಿತಾ ಪಿ ,ಕಲಾವತಿ ಜೆ, ಕವನ, ನಂದಿನಿ, ಕಾವ್ಯ, ವಾಹನ ಚಾಲಕ ಬಿ, ಹರೀಶ್, ನಾಗರಾಜ್, ಸೇರಿದಂತೆ ಶಾಲೆಯ ವಿದ್ಯಾರ್ಥಿ ವಿದ್ಯಾರ್ಥಿನಿಯರು ಹಾಗೂ ಸೊಕ್ಕೆ ಗ್ರಾಮದ ಸಮಸ್ತ ಗ್ರಾಮಸ್ಥರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಉಪಸ್ಥಿತರಿದ್ದರು

About The Author
Discover more from JANADHWANI NEWS
Subscribe to get the latest posts sent to your email.