January 29, 2026
IMG-20250109-WA0086.jpg

ಚಳ್ಳಕೆರೆ ನಗರದ ಎಚ್.ಪಿ.ಪಿ.ಸಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಹೊಸದಾಗಿ ಮೈಸೂರು ವಿಶ್ವವಿದ್ಯಾಲಯದ ಅಡಿಯಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವನ್ನು(ಕೆಎಸ್‍ಒಯು) ಪ್ರಾರಂಭಿಸುವ ಕುರಿತು ಸ್ಥಳ ಪರಿಶೀಲನೆ ನಡೆಸಿ, ಇದರಿಂದ ಮೊಳಕಾಲ್ಮೂರು, ಹಿರಿಯೂರು, ಚಳ್ಳಕೆರೆ ತಾಲ್ಲೂಕುಗಳ ವಿದ್ಯಾರ್ಥಿಗಳಿಗೆ ದೂರ ಶಿಕ್ಷಣ ಪಡೆಯಲು ಸಹಾಯಕವಾಗಲಿದೆ ಎಂದು ಕ್ಷೇತ್ರದ ಶಾಸಕ, ಸಣ್ಣಕೈಗಾರಿಕೆ ಅಭಿವೃದ್ದಿಮಂಡಳಿ ಅಧ್ಯಕ್ಷ ಟಿ.ರಘುಮೂರ್ತಿ ತಿಳಿಸಿದರು.
ಅವರು, ನಗರದ ಎಚ್‍ಪಿಪಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸುಮಾರು 12 ಲಕ್ಷ ವೆಚ್ಚದಲ್ಲಿ ನೂತನವಾಗಿ ಕಂಪ್ಯೂಟರ್ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು ಕಳೆದ ಸುಮಾರು 12 ವರ್ಷಗಳಿಂದ ಎಚ್‍ಪಿಪಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಹೆಚ್ಚಿನ ಸೌಲಭ್ಯ ನೀಡುವಲ್ಲಿ ನಮ್ಮ ಸರ್ಕಾರ ಯಶಸ್ವಿಯಾಗಿದೆ. ಗ್ರಾಮೀಣ ಭಾಗದ ಸುಮಾರು ಮೂರು ಸಾವಿರ ವಿದ್ಯಾರ್ಥಿಗಳು ಇದ್ದು, ಕಾಲೇಜಿನಲ್ಲಿರುವ ಎಲ್ಲಾ ವಿಭಾಗಗಳಲ್ಲಿ ಪರಿಣಿತಿಪಡೆದೆ ಪ್ರಾಧ್ಯಾಪಕರು ಕಾಲೇಜಿನಲ್ಲಿದ್ದು, ವಿದ್ಯಾರ್ಥಿಗಳ ಭವಿಷ್ಯವನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಶ್ರಮವಹಿಸಿ ಕಾರ್ಯನಿರ್ವಹಿಸಬೇಕೆಂದು ತಿಳಿಸಿದರು.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಡೀನ್ ರಾಮನಥನಾಯ್ಡು, ಶಾಸಕರಿಗೆ ಮುಕ್ತವಿಶ್ವವಿದ್ಯಾಲಯದ ಕಾರ್ಯಚಟುವಟಿಕೆಯ ಬಗ್ಗೆ ಸಂಕ್ಷಿಪ್ತ ಮಾಹಿತಿ ನೀಡಿ, ಇದೇ ಕಾಲೇಜಿನ ಆವರಣದಲ್ಲಿ ಮುಂಬರುವ ಶೈಕ್ಷಣಿಕ ವರ್ಷದಿಂದಲೇ ಮುಕ್ತವಿಶ್ವವಿದ್ಯಾಲಯ ತನ್ನ ಕಾರ್ಯಚಟುವಟಿಕೆ ಆರಂಭಿಸಲು ನಿರ್ಧರಿಸಿದ್ದು, ಇದಕ್ಕೆ ತಕ್ಕಂತೆ ಸಿದ್ದತೆಗಳು ನಡೆಯಬೇಕು ಎಂದರು.
ಪ್ರಾಂಶುಪಾಲ ಎಸ್.ಮಂಜುನಾಥ, ಕಾರ್ಯಪಾಲಕ ಅಭಿಯಂತರ ಭಾಸ್ಕರ, ಸಹಾಯಕ ಕಾರ್ಯಪಾಲಕ ಅಭಿಯಂತರ ವಿಜಯಭಾಸ್ಕರ್ ಪ್ರಾಧ್ಯಾಪಕ ವರ್ಗ, ನಗರಸಭಾ ಸದಸ್ಯ ಬಿ.ಟಿ.ರಮೇಶ್‍ಗೌಡ, ನಾಮಿನಿ ಸದಸ್ಯ ಆರ್.ವೀರಭದ್ರಯ್ಯ ಮುಂತಾದವರು ಉಪಸ್ಥಿತರಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading