January 29, 2026
IMG-20250209-WA0130.jpg

ವರದಿ: ಕೆ.ಟಿ.ಮೋಹನ್ ಕುಮಾರ್

ಸಾಲಿಗ್ರಾಮ (ಮೈಸೂರು ಜಿಲ್ಲೆ): ತಾಲೂಕಿನ ಮೇಲೂರು ಗ್ರಾಮದ ಶ್ರೀ ಶಂಭುಲಿಂಗೇಶ್ವರ ದೇವಸ್ಥಾನ ಬಳಿ ನೂತನವಾಗಿ ನಿರ್ಮಿಸಿರುವ ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವಿಗ್ರಹ ಪ್ರತಿಷ್ಠಾಪನೆ ಹಾಗೂ ಕುಂಭಾಭಿಷೇಕ ಮಹೋತ್ಸವವು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನೆರವೇರಿತು.

ದೇವಸ್ಥಾನದಲ್ಲಿ ಮುಂಜಾನೆಯಿಂದಲೇ ಗಣ ಹೋಮ, ವಾಸ್ತು ಹೋಮ, ಗಣಪತಿ ಪೂಜೆ, ನವಗ್ರಹ ಆರಾಧನೆ, ಮೃತ್ಯುಂಜಯ ಆರಾಧನೆ, ಅಷ್ಟೋತ್ತರ ಕಳಸ ಸ್ಥಾಪನೆ, ನಿಧಿ ಸ್ಥಾಪನೆ, ಸಪ್ತಮಾತೃಕೆ ಆರಾಧನೆ, ಯಂತ್ರನ್ಯಾಸ, ಪೀಠ ನ್ಯಾಸ, ತಾಳಿನ್ಯಾಸ, ಕಳಸಾರೋಹಣ, ಅಷ್ಟ ಬಂಧನ ಪ್ರಾಣ ಪ್ರತಿಷ್ಠಾಪನೆ, ಕಲಾ ಹೋಮ, ಪ್ರಧಾನ ಹೋಮ, ಕಳಸ ಪ್ರತಿಷ್ಠಾಪನೆ, ದರ್ಪಣ ದರ್ಶನ, ಮಹಾ ನೈವೇದ್ಯಗಳು, ಪಂಚಾಮೃತ ಅಭಿಷೇಕ, ಮಂತ್ರ ಪುಷ್ಪಾರ್ಚನೆ ಸೇರಿದಂತೆ ವಿವಿಧ ಪೂಜಾ ಕಾರ್ಯಗಳನ್ನು ಮಾಡಿ ನಂತರ ಮಹಾ ಮಂಗಳಾರತಿಯನ್ನು ಮಾಡಿ ತೀರ್ಥ ಪ್ರಸಾದವನ್ನು ನೀಡಲಾಯಿತು.

ಮೇಲೂರು ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ನೂರಾರು ಭಕ್ತರುಗಳು ಬೆಳಿಗ್ಗೆಯಿಂದಲೇ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದರು.

ದೇವರ ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕರು ಹಾಗೂ ಭಕ್ತಾದಿಗಳಿಗೆ ಅನ್ನಸಂತರ್ಪಣಾ ಕಾರ್ಯವನ್ನು ಮಾಡಲಾಯಿತು.

ದೇವಾಲಯವನ್ನು ತಳಿರು ತೋರಣ, ಹೂವು ಹಾಗೂ ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗಿತ್ತು.

ಈ ಸಂದರ್ಭದಲ್ಲಿ ದೇವರ ಮೂರ್ತಿಯನ್ನು ಕೆತ್ತನೆ ಮಾಡಿದ ಶಿಲ್ಪಿಗಳನ್ನು ಸನ್ಮಾನಿಸಲಾಯಿತು.

ದೇವತಾ ಕಾರ್ಯದಲ್ಲಿ ಕರ್ಪೂರವಳ್ಳಿ ಜಂಗಮ ಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಶಾಸಕ ಡಿ.ರವಿಶಂಕರ್, ದೇವಸ್ಥಾನದ ಸಂಸ್ಥಾಪಕ ಪ್ರಕಾಶ್ ಪುರೋಹಿತ್, ಶಂಭುಲಿಂಗೇಶ್ವರ ದೇವಸ್ಥಾನದ ಪುರೋಹಿತ ಬಸವರಾಜು ಬುದ್ಧಿ, ಮೈಮುಲ್ ನಿರ್ದೇಶಕ ಎ.ಟಿ.ಸೋಮಶೇಖರ್, ತಾಲೂಕು ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಸಿ.ಪಿ.ರಮೇಶ್ ಕುಮಾರ್, ಎಪಿಎಂಸಿ ಮಾಜಿ ಅಧ್ಯಕ್ಷ ಕುಪ್ಪಳ್ಳಿ ಸೋಮಶೇಖರ್, ಶಿಲ್ಪಿ ರವಿಕುಮಾರ್, ತಮ್ಮಣ್ಣ, ಕುಮಾರ್, ಪುನೀತ್, ಹೊಸೂರು ಸುಬ್ರಮಣ್ಯ, ಅಂಕನಹಳ್ಳಿ ಉಲ್ಲಾಸ್, ನಯನಪ್ರಕಾಶ್, ಮಹದೇವಚಾರ್, ಪ್ರಕಾಶ್, ಕಾಂತರಾಜು, ಜನಪ್ರತಿನಿಧಿಗಳು, ಮುಖಂಡರು, ಮಹಿಳೆಯರು, ಮಕ್ಕಳು ಸೇರಿದಂತೆ ನೂರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading