ಚಳ್ಳಕೆರೆ:ತಾಲೂಕಿನ ಕರ್ನಾಟಕ ರಾಜ್ಯ ರೈತ ಸಂಘದ ಹಿರಿಯ ಉಪಾಧ್ಯಕ್ಷ ಕೆಪಿ ಭೂತಯ್ಯ ರವರ ನಾಟಕ ಕಲಾ ಸೇವೆಯನ್ನು ಗುರುತಿಸಿ ಕರ್ನಾಟಕ ಬಯಲಾಟ ಅಕಾಡೆಮಿಯ ಪ್ರಶಸ್ತಿಯನ್ನು ಬಾಗಲಕೋಟೆ ಜಿಲ್ಲೆಯ ನವನಗರದ ಕಲಾಭವನದಲ್ಲಿ ಫೆ.10ರಂದು ಪ್ರಶಸ್ತಿ ನೀಡಿ ಗೌರವಿಸಲಿದೆ ಪ್ರಶಸ್ತಿಗೆ ಆಯ್ಕೆಯಾಗಿರುವ ಬಗ್ಗೆ ಮಾತನಾಡಿದ ಕೆಪಿ ಬೂತಯ್ಯ ಬಾಲ್ಯದಿಂದಲೂ ನಾಟಕಗಳಲ್ಲಿ ಅತ್ಯಂತ ಹೆಚ್ಚಿನ ಆಸಕ್ತಿ ಹೊಂದಿದ್ದೆನು ರೈತಪರ ಹೋರಾಟಗಳ ಜೊತೆಗೆ ಕಲಾಸಕ್ತಿಯನ್ನು ಬೆಳೆಸಿಕೊಂಡು ದ್ರೌಪದಿ ಪಾತ್ರ ಸೇರಿದಂತೆ ಹಲವು ವೇಷಗಳನ್ನು ಧರಿಸಿ ನಾಟಕ ಕಲಾಸೇವೆಯಲ್ಲಿ ನಿರತನಾಗಿದ್ದೇನೆ ಈ ಪ್ರಶಸ್ತಿ ದೊರೆತಿರುವುದಕ್ಕೆ ಸಂತಸವಾಗಿದ್ದು ನನ್ನ ಕಲಾಸೇವೆ ಹಾಗೂ ರೈತಪರ ಹೋರಾಟಗಳಲ್ಲಿ ಬೆನ್ನೆಲುಬಾಗಿ ನಿಂತ ತಾಲೂಕಿನ ಎಲ್ಲಾ ಕಲಾ ರಸಿಕರಿಗೆ ಹಾಗೂ ಹೋರಾಟಗಾರರಿಗೆ ಪ್ರಶಸ್ತಿಯನ್ನು ಅರ್ಪಿಸುವುದಾಗಿ ತಿಳಿಸಿದರು.
ರೈತ ಮುಖಂಡ ಕೆಪಿ ಬೂತಯ್ಯನವರಿಗೆ ಬಯಲಾಟ ಅಕಾಡೆಮಿ ಪ್ರಶಸ್ತಿ ನೀಡಿರುವುದಕ್ಕೆ ಛಾಯಾಚಿತ್ರಗ್ರಾಹಕರ ಸಂಘದ ಅಧ್ಯಕ್ಷ ನೇತಾಜಿ ಪ್ರಸನ್ನ ಸೇರಿದಂತೆ ಹಲವರು ಶುಭಹಾರೈಸಿದ್ದಾರೆ.


About The Author
Discover more from JANADHWANI NEWS
Subscribe to get the latest posts sent to your email.