ವರದಿ: ಕೆ.ಟಿ.ಮೋಹನ್ ಕುಮಾರ್
ಚಾಮರಾಜನಗರ ಜಿಲ್ಲೆಯ ನಗರದ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಉಪ್ಪಾರ ಸಮುದಾಯದ ಮೂಲಪುರುಷರಾದ ಮಹರ್ಷಿ ಶ್ರೀ ಭಗೀರಥರು,
ಮಹರ್ಷಿ ಶ್ರೀ ವಾಲ್ಮೀಕಿ ಹಾಗೂ ಕನಕದಾಸರ ಪುತ್ಥಳಿಗಳ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಒಪ್ಪಿಗೆ ನೀಡಿರುವುದು ಸ್ವಾಗತಾರ್ಹವಾಗಿದ್ದು ಸಮುದಾಯದ ಪರವಾಗಿ ಮುಖ್ಯಮಂತ್ರಿಗಳಿಗೆ ಹಾಗೂ ರಾಜ್ಯ ಸರ್ಕಾರಕ್ಕೆ ಈ ಮೂಲಕ ಅಭಿನಂದನೆ ಸಲ್ಲಿಸಲಾಗುವುದು ಎಂದು ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಶ್ರೀ ಭಗೀರಥ ಪೀಠದ ಡಾ. ಶ್ರೀ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ ಹೇಳಿದರು.
ಅವರು ಚಾಮರಾಜನಗರ ತಾಲೂಕಿನ ದೊಡ್ಡಮೋಳೆ ಗ್ರಾಮಕ್ಕೆ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳುತ್ತಿದ್ದಾಗ ನಗರದ ಬೈಪಾಸ್ ರಸ್ತೆಯಲ್ಲಿ ಚಾಮರಾಜನಗರ ಜಿಲ್ಲಾ ಉಪ್ಪಾರ ಯುವಕರ ಸಂಘದವರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ವೆಂಕಟೇಶ್ ಅವರು ಹಾಗೂ ಕರ್ನಾಟಕ ರಾಜ್ಯ ಉಪ್ಪಾರ ಸಂಘದ ಅಧ್ಯಕ್ಷರು, ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರುಗಳು ಸೇರಿ ಜಿಲ್ಲಾಡಳಿತದ ವತಿಯಿಂದ ಮಹನೀಯರುಗಳ ಪುತ್ತಳಿಗಳನ್ನು ನಿರ್ಮಾಣ ಮಾಡುತ್ತಿರುವುದು ಉತ್ತಮ ಕಾರ್ಯವಾಗಿದೆ.
ಮಹರ್ಷಿ ಶ್ರೀ ವಾಲ್ಮೀಕಿ, ಕನಕದಾಸರು ಹಾಗೂ ಕಠಿಣ ತಪಸ್ಸಿನ ಮೂಲಕ ಧರೆಗೆ ದೇವಗಂಗೆ ತಂದ ಮಹರ್ಷಿ ಶ್ರೀ ಭಗೀರಥರು ನಾಡಿಗೆ ಅಪಾರ ಕೊಡುಗೆ ನೀಡಿದ್ದಾರೆ. ಅವರುಗಳ ಪುತ್ಥಳಿಗಳ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿರುವುದು ತುಂಬಾ ಖುಷಿಯಾಗಿದೆ. ಈ ಸಂಬಂಧವಾಗಿ ನಾವು ವಾಲ್ಮೀಕಿ ಶ್ರೀಗಳು, ಕನಕಪೀಠದ ಶ್ರೀಗಳು ಚರ್ಚಿಸಲಾಗಿದ್ದು ಮುಖ್ಯಮಂತ್ರಿಗಳು ಶಂಕುಸ್ಥಾಪನೆಗೆ ದಿನಾಂಕ ನಿಗದಿ ಮಾಡಿದರೆ ಮುಖ್ಯಮಂತ್ರಿಗಳೊಂದಿಗೆ ಮೂವರು ಸಮುದಾಯ ಸ್ವಾಮೀಜಿಗಳು ಒಟ್ಟಿಗೆ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇವೆ.
ಇಂತಹ ಕಾರ್ಯಕ್ಕೆ ಸಮುದಾಯಗಳ ಸಹಕಾರ ಅಗತ್ಯವಾಗಿದೆ. ಇದೊಂದು ಸಾಮಾಜಿಕ ನ್ಯಾಯವಾಗಿದ್ದು ಸಮಾಜದಲ್ಲಿ ಸಾಮರಸ್ಯ ಮೂಡಿಸುತ್ತದೆ. ಸಮುದಾಯಗಳ ವತಿಯಿಂದ ಸರ್ಕಾರಕ್ಕೆ ಮುಂದಿನ ದಿನಗಳಲ್ಲಿ ಅಭಿನಂದನೆ ಸಲ್ಲಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಚಾಮರಾಜನಗರ ಜಿಲ್ಲಾ ಉಪ್ಪಾರ ಯುವಕರ ಸಂಘದ ಅಧ್ಯಕ್ಷ ಜಯಕುಮಾರ್, ಉಪ್ಪಾರ ಸಮಾಜದ ಮುಖಂಡರುಗಳಾದ ಯಳಂದೂರಿನ
ವೈ.ಕೆ.ಮೋಳೆರಾಜು, ಯರಿಯೂರಿನ ದೊಡ್ಡರಾಜು, ಸ್ವಾಮಿಜಿ ಅವರ ಸಹಾಯಕ ಸೀನಪ್ಪ ಇದ್ದರು.
About The Author
Discover more from JANADHWANI NEWS
Subscribe to get the latest posts sent to your email.