ವರದಿ: ಕೆ.ಟಿ.ಮೋಹನ್ ಕುಮಾರ್
ಕೆ.ಆರ್.ನಗರ (ಮೈಸೂರು ಜಿಲ್ಲೆ): ಕೆ.ಆರ್.ನಗರದ ಪಿ ಎಲ್ ಡಿ ಬ್ಯಾಂಕ್ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ಬ್ಯಾಂಕಿನ ಮಾಜಿ ಅಧ್ಯಕ್ಷರಾದ ಸಾಲಿಗ್ರಾಮದ ಎಸ್.ಎಂ.ಸೋಮಣ್ಣ ಅವರು ಜಾದಳ ಪಕ್ಷದ ಬೆಂಬಲಿತ ಅಭ್ಯರ್ಥಿಯಾಗಿ ಸಾಲಿಗ್ರಾಮದ ಸಾಲಗಾರರ ಸಾಮಾನ್ಯ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ.

ಈ ಸಂದರ್ಭದಲ್ಲಿ ಜಾ. ದಳ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಕಲ್ಯಾಣಪುರ ಚಂದ್ರಶೇಖರ್, ಅಪೇಕ್ಸ್ ಬ್ಯಾಂಕಿನ ಮಾಜಿ ನಿರ್ದೇಶಕ ಎಸ್.ಕೆ.ಮಧುಚಂದ್ರ, ಸಾಲಿಗ್ರಾಮ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್.ಆರ್.ದಿನೇಶ್, ಸಾಲಿಗ್ರಾಮ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಪಾಪಣ್ಣ, ಚಿಕ್ಕನಾಯಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಮಾಜಿ ಕಾರ್ಯದರ್ಶಿ ಗೋಪಾಲ್, ಮುಖಂಡರಾದ ಹೆಬ್ಬಾಳು ಹೆಚ್.ಪಿ.ಶಿವಣ್ಣ, ಸಾಲಿಗ್ರಾಮದ
ಯುವ ಮುಖಂಡ
ಎಸ್.ಎಸ್.ಶ್ರೀನಿವಾಸ್, ಸೋಮು, ಹೊನ್ನೇನಹಳ್ಳಿ ಅಶೋಕ್ ಸೇರಿದಂತೆ ಹಲವರು ಇದ್ದರು.

About The Author
Discover more from JANADHWANI NEWS
Subscribe to get the latest posts sent to your email.