ವರದಿ: ಕೆ.ಟಿ.ಮೋಹನ್ ಕುಮಾರ್
ಸಾಲಿಗ್ರಾಮ (ಮೈಸೂರು ಜಿಲ್ಲೆ): ಸಾಲಿಗ್ರಾಮ ಪಟ್ಟಣದ ಶ್ರೀ ಯೋಗಾನರಸಿಂಹ ಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿ ಕಾರ್ಯವು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಶೇಷವಾಗಿ ನೆರವೇರಿತು.

ದೇವಾಲಯದ ಆವರಣವನ್ನು ಬಣ್ಣ ಬಣ್ಣದ ವಿದ್ಯುತ್ ದೀಪಗಳು ಹಾಗೂ ಹೂವುಗಳಿಂದ ವಿಶೇಷವಾಗಿ ಶೃಂಗಾರ ಮಾಡಲಾಗಿತ್ತು.
ಶುಕ್ರವಾರ ಮುಂಜಾನೆಯಿಂದಲೇ ದೇವಾಲಯದಲ್ಲಿ ಪೂಜಾ ಕಾರ್ಯಗಳು ಆರಂಭಗೊಂಡು ದೇವರ ಮೂರ್ತಿಗಳಿಗೆ ವಿವಿಧ ಅಭಿಷೇಕಗಳು ನೈವೇದ್ಯಗಳನ್ನು ನೆರವೇರಿಸಿ ನಂತರ ಹೂವು ಹಾಗೂ ಬೆಣ್ಣೆಯಿಂದ ವಿಶೇಷ ಅಲಂಕಾರ ಮಾಡಿ ಮಹಾಮಂಗಳಾರತಿಯನ್ನು ಮಾಡಲಾಯಿತು.
ದೇವಸ್ಥಾನಕ್ಕೆ ಮುಂಜಾನೆಯಿಂದಲೇ ಭಕ್ತರು ಆಗಮಿಸಿ ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನವನ್ನು ಪಡೆಯುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.
ಈ ಸಂದರ್ಭದಲ್ಲಿ ಮೈಸೂರು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಸಾ.ರಾ.ನಂದೀಶ್ ಅವರು ದೇವಸ್ಥಾನಕ್ಕೆ ಆಗಮಿಸಿದ ಎಲ್ಲಾ ಭಕ್ತರು ಹಾಗೂ ಸಾರ್ವಜನಿಕರಿಗೆ ಲಾಡು ವಿತರಣೆ ಮಾಡಿದರು.
ಪಟ್ಟಣ ಹಾಗೂ ತಾಲೂಕಿನ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜಾ ಕಾರ್ಯಗಳನ್ನು ನೆರವೇರಿಸಿ ಸಾರ್ವಜನಿಕರಿಗೆ ಪ್ರಸಾದ ವಿನಿಯೋಗ ಮಾಡಲಾಯಿತು.
ಈ ಎಲ್ಲಾ ಕಾರ್ಯಕ್ರಮಗಳಲ್ಲೂ ಜನಪ್ರತಿನಿಧಿಗಳು, ಮುಖಂಡರುಗಳು, ಮಹಿಳೆಯರು, ಮಕ್ಕಳು ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಪಾಲ್ಗೊಂಡು ದೇವರ ದರ್ಶನವನ್ನು ಪಡೆದರು.
About The Author
Discover more from JANADHWANI NEWS
Subscribe to get the latest posts sent to your email.