January 29, 2026
FB_IMG_1768054688329.jpg

ಹಿರಿಯೂರು:
ನಗರದ ನೆಹರು ಕ್ರೀಡಾಂಗಣದಲ್ಲಿ ನ್ಯೂ ಡೈಮಂಡ್ ಪೋಸ್ಟ್ ಕ್ಲಬ್ ಹಿರಿಯೂರು, ಇವರ ವತಿಯಿಂದ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಅವರ ಸಾರಥ್ಯದಲ್ಲಿ ಜನವರಿ 31 ಹಾಗೂ ಫೆಬ್ರವರಿ 1 ರ ಶನಿವಾರ ಮತ್ತು ಭಾನುವಾರ ರಾಜ್ಯಮಟ್ಟದ ಪುರುಷರ ಹೊನ್ನಲು ಬೆಳಕಿನ ಆಹ್ವಾನಿತ ಕಬ್ಬಡಿ ಪಂದ್ಯಾವಳಿಯನ್ನು ಏರ್ಪಡಿಸಲಾಗಿದೆ ಎಂಬುದಾಗಿ ನ್ಯೂ ಡೈಮಂಡ್ ಸ್ಪೋಟ್ಸ್ ಕ್ಲಬ್ ಮಾಧ್ಯಮಗಳಿಗೆ ಮಾಹಿತಿ ನೀಡಿದೆ.
ಈ ಪಂದ್ಯಾವಳಿಯಲ್ಲಿ ಸುಮಾರು 18 ತಂಡಗಳು ಭಾಗವಹಿಸಲಿದ್ದು, ಗ್ಯಾಲರಿ ವ್ಯವಸ್ಥೆ ಮಾಡಲಾಗಿದೆ. ಪ್ರೇಕ್ಷಕರಿಗೆ ರಸದೌತಣ ನೀಡಲು ನೆಹರು ಕ್ರೀಡಾಂಗಣ ಸಜ್ಜಾಗಿದೆ. ಶ್ರೀ ತೇರುಮಲ್ಲೇಶ್ವರ ಸ್ವಾಮಿ ಜಾತ್ರೆ ಅಂಗವಾಗಿ ಈ ಕಬ್ಬಡಿ ಪಂದ್ಯಾವಳಿಯನ್ನು ಹಮ್ಮಿಕೊಳ್ಳಲಾಗಿದ್ದು, ಹೊರಗಿನಿಂದ ಬಂದಂತಹ ತಂಡಗಳಿಗೆ ಊಟ ಮತ್ತು ವಸತಿ ಸೌಕರ್ಯವನ್ನು ಕಲ್ಪಿಸಲಾಗಿದೆ.
ಹಿರಿಯೂರಿನ ನಾಗರೀಕರು, ವರ್ತಕರು, ಸಮಾಜಸೇವಕರು, ಸಾರ್ವಜನಿಕರು ಎಲ್ಲರೂ ಸಹ ತಮ್ಮ ತನುಮನ ಧನ ಸಹಾಯದೊಂದಿಗೆ, ಈ ರಾಜ್ಯಮಟ್ಟದ ಪುರುಷರ ಹೊನ್ನಲು ಬೆಳಕಿನ ಆಹ್ವಾನಿತ ಕಬ್ಬಡಿ ಪಂದ್ಯಾವಳಿಯನ್ನು ಯಶಸ್ವಿಗೊಳಿಸಬೇಕು ಎಂಬುದಾಗಿ ನ್ಯೂ ಡೈಮಂಡ್ ಸ್ಪೋಟ್ಸ್ ಕ್ಲಬ್ ವತಿಯಿಂದ ಮನವಿ ಮಾಡಲಾಗಿದೆ.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading