ಹೊಸದುರ್ಗ: ವಿದ್ಯಾರ್ಥಿಗಳು ನಿರಂತರ ಕಲಿಕೆಯನ್ನು ರೂಢಿಸಿಕೊಂಡರೆ ಹೆಚ್ಚು ಅಂಕಗಳನ್ನು ಪಡೆಯಲು ಸಾಧ್ಯ ಎಂದು ಜಿಲ್ಲಾ ಕೆಡಿಪಿ ಸದಸ್ಯೆ ಶ್ರೀಮತಿ ದೀಪಿಕಾ ಸತೀಶ್ ಹೇಳಿದರು.
ಪಟ್ಟಣದ ಶ್ರೀ ತೋಟದ ರಾಮಯ್ಯ ಗೌರಮ್ಮ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ಪರೀಕ್ಷಾ ಪೂರ್ವ ತಯಾರಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ನಾನು ಕೂಡ ಈ ಶಾಲೆಯ ವಿದ್ಯಾರ್ಥಿಯಾಗಿ ಓದಿ ಜೀವನದಲ್ಲಿ ವಿವಿಧ ಹಂತಗಳಲ್ಲಿ ಸಾಧನೆ ಮಾಡಲು ಸಾಧ್ಯವಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ ಪಿ ಓಂಕಾರಪ್ಪ ಮಾತನಾಡಿ ವಿದ್ಯಾರ್ಥಿಗಳು ತಮ್ಮ ಮನೆಯ ಪರಿಸ್ಥಿತಿಯನ್ನು ಸರಿಯಾಗಿ ಅರ್ಥಮಾಡಿಕೊಂಡರೆ ಉತ್ತಮವಾಗಿ ಓದಲು ಸಾಧ್ಯ ಎಂದು ತಿಳಿಸಿದರು.
ಶಾಲಾ ಸಮಿತಿಯ ಸದಸ್ಯ ಫಾಲಾಕ್ಷಮೂರ್ತಿ, ಮುಖ್ಯ ಶಿಕ್ಷಕ ಎ ಎನ್ ಕಿರಣ್ ಕುಮಾರ್ ಮಾತನಾಡಿದರು. ವಿದ್ಯಾರ್ಥಿಗಳಾದ ಅಮೃತ ವರ್ಷಿಣಿ, ಸಹನಾ ಕಾರ್ಯಕ್ರಮ ನಿರೂಪಿಸಿದರು. ಸಹನಾ ಬಿ ಟಿ ಸ್ವಾಗತಿಸಿದರು. ಪ್ರಾರ್ಥನ ಮತ್ತು ರಕ್ಷಿತ ಪ್ರಾರ್ಥಿಸಿದರು. ವಿದ್ಯಾ ವಂದಿಸಿದರು.
About The Author
Discover more from JANADHWANI NEWS
Subscribe to get the latest posts sent to your email.