
ಚಳ್ಳಕೆರೆ ಜು.10
ಗುರು ಪೂರ್ಣಿಮೆ ಅಂಗವಾಗಿ ಗುರುವಾರ ಪಾವಗಡ ರಸ್ತೆಯ ಶ್ರೀ ಶಿರಡಿ ಸಾಯಿಬಾಬಾ ಮಂದಿರದಲ್ಲಿ ವಿವಿಧ ಭಾಗಗಳಿಂದ ಆಗಮಿಸಿದ್ದ ಭಕ್ತಾದಿಗಳು ಸರತಿ ಸಾಲಿನಲ್ಲಿ ಸಾಯಿಬಾಬಾ ಮೂರ್ತಿಯ ದರ್ಶನ ಪಡೆದು ಪುನಿತರಾದರು.
ಬೆಳಗ್ಗೆ ಕಾಕಡಾರತಿ, ಕ್ಷೀರಾಭಿಷೇಕ, ಶ್ರೀ ಸಾಯಿ ಸತ್ಯನಾರಾಯಣ ಪೂಜೆ, ಶ್ರೀ ಸಾಯಿ ಅಷ್ಟೋತ್ತರ ಪುಷ್ಪಾರ್ಚನೆ ಮಾಡಲಾಯಿತು.
ಮಧ್ಯಾಹ್ನ ಭಕ್ತಾದಿಗಳಿಗೆ ಅನ್ನಸಂರ್ಪಣೆ ಏರ್ಪಡಿಸಲಾಗಿತ್ತು. ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಿದ ಭಕ್ತಾದಿಗಳು ಪೂಜೆಯಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು. ದೇವಸ್ಥಾನ ಟ್ರಸ್ಟ್ ಕಮಿಟಿ ಅಧ್ಯಕ್ಷ ಸಂಜೀವಮೂರ್ತಿ ಟ್ರಸ್ಟ್ ಸದಸ್ಯರು ವಿವಿಧ ಸಮಿತಿ ಸದಸ್ಯರು ಪೂಜೆ ಮತ್ತು ಅನ್ನ ಸಂತರ್ಪಣೆ ಕಾರ್ಯಗಳಲ್ಲಿ ಪಾಲ್ಗೊಂಡಿದ್ದರು.






ಶಾಸಕ ಟಿ.ರಘುಮೂರ್ತಿ. ನಗರಸಭೆ ಅಧ್ಯಕ್ಷೆ ಶಿಲ್ಪ.ಉಪಾಧ್ಯಕ್ಷೆ ಕವಿತಾ.ಪ್ರಭುದೇವ್. ಶಿರಡಿಸಾಯಿಬಾಬಾ ದರ್ಶನ ಪಡೆದರು.
About The Author
Discover more from JANADHWANI NEWS
Subscribe to get the latest posts sent to your email.