ಹಿರಿಯೂರು :
ಮಧ್ಯಕರ್ನಾಟಕದ ರೈತರ ಏಕೈಕ ಜೀವನಾಡಿ ವಾಣಿವಿಲಾಸ ಜಲಾಶಯದ ನೀರಿನ ಮಟ್ಟ ಶುಕ್ರವಾರ 127.50ಅಡಿಗೆ ಏರಿಕೆಯಾಗಿದೆ. ವಾಣಿವಿಲಾಸಸಾಗರ ಜಲಾಶಯಕ್ಕೆ ಕಳೆದೊಂದು ತಿಂಗಳಿನಿಂದ ಭದ್ರಾ ಜಲಾಶಯದಿಂದ ಪ್ರತಿದಿನ 924ಕ್ಯೂಸೆಕ್ ನೀರಿನ ಒಳ ಹರಿವು ಇತ್ತು.
ಇದರ ಮಧ್ಯೆ ಇದೇ ವಾರ ಮೂರು ದಿನಗಳ ಕಾಲ ನೀರು ಸ್ಥಗಿತವಾಗಿತ್ತು.ಈಗ ಗುರುವಾರ ಮತ್ತು ಶುಕ್ರವಾರ ನೀರಿನ ಒಳಹರಿವು 924 ಕ್ಯೂಸೆಕ್ ಇದ್ದು ದಿಢೀರ್ ಏರಿಕೆಯಾಗಿದ್ದು, ಇನ್ನು ವಾಣಿವಿಲಾಸ ಸಾಗರ ಜಲಾಶಯದ ನೀರಿನ ಸಂಗ್ರಹ ಸಾಮರ್ಥ್ಯ ಒಟ್ಟು 135 ಅಡಿ ಆಗಿದ್ದು, 130 ಅಡಿಗೆ ಕೋಡಿ ಹರಿಯಲಿದೆ ಜಲಾಶಯದಲ್ಲಿ 30 ಟಿ.ಎಂ.ಸಿ ಅಡಿ ನೀರು ಸಂಗ್ರಹವಾಗುವ ಸಾಮರ್ಥ್ಯ ಹೊಂದಿದೆ.
ಈ ಕುರಿತು ಕಾರ್ಯಪಾಲಕ ಅಭಿಯಂತರ ಚಂದ್ರಪ್ಪ ಮಾತನಾಡಿ, ವಿಶ್ವೇಶ್ವರಯ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕರು ನೀರು ಹರಿಸುವಂತೆ ಸೂಚನೆ ನೀಡಿದ್ದು, ಮುಂದಿನ ಆದೇಶದವರೆಗೂ ಪ್ರತಿನಿತ್ಯ ಒಂದು ಪಂಪ್ ರನ್ ಮಾಡಿ ವಾಣಿವಿಲಾಸ ಸಾಗರ ಜಲಾಶಯಕ್ಕೆ ನೀರು ಹರಿಸಲಾಗುತ್ತದೆ ಎಂಬುದಾಗಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

About The Author
Discover more from JANADHWANI NEWS
Subscribe to get the latest posts sent to your email.