ಚಳ್ಳಕೆರೆ ಡಿ10
ನಗರದ ಅಧಿಕಾರಿಯೊಬ್ಬರ ಮನೆ ಹಾಗೂ ಬಾಡಿಗೆ ಎರಡು ಕಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನೀಡಿ ಶಾಖ್ ನೀಡಿದ್ದಾರೆ.
ನಿದ್ರೆಯ ಮಂಪರಿನಲ್ಲಿರುವಾಗಲೆ ಚಳ್ಳಕೆರೆ ನಗರದ ವಿಠಲನಗರದಲ್ಲಿ ವಾಸ ಮನೆ ಹಾಗೂ ವಾಲ್ಮೀಕಿನಗರದ ಬಾಡಿಗೆ ಮನೆಹೊಂದಿದ್ದ ಹಿರಿಯೂರು ವಲಯದ ಜಿಲ್ಲಾ ಅರಣ್ಯ ಸಂರಕ್ಷಣಾ ಸಹಾಯಕಾಧಿಕಾರಿ ಸುರೇಶ್ ಮನೆ ಮೇಲೆ ಬೆಳ್ಳ ಬೆಳಗ್ಗೆ ಲೋಕಾಯುಕ್ತ ಅಧಿಕಾರಿದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಪರಿಶೀಲನೆ ನಂತರ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ. ದಾಳಿಯಲ್ಲಿ ಇನ್ಸ್ಪೆಕ್ಟರ್ ಮಂಜುನಾಥ್, ಸರಳ, ಹಾಗೂ ಸಿಬ್ಬಂದಿ ಭಾಗವಹಿಸಿದ್ದು ಸುಮೋಟೋ ಅಡಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.




About The Author
Discover more from JANADHWANI NEWS
Subscribe to get the latest posts sent to your email.