January 29, 2026
n6427536281733810058868a9fa91ed96f4fe6e11a6df703889bcb134357f71259c4d00d1b5249ca02481e8.jpg

ಬೆಂಗಳೂರು.ಡಿ.10ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ನಿಧನದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ ಘೋಷಣೆ ಮಾಡಲಾಗಿದೆ. ಜೊತೆಗೆ ನಾಳೆ ಒಂದು ದಿನ ಸರ್ಕಾರಿ ರಜೆಯನ್ನು ಘೋಷಿಸಿ ಡಿಸಿಎಂ ಡಿ.ಕೆ ಶಿವಕುಮಾರ್ ಆದೇಶಿಸಿದ್ದಾರೆ.ಇಂದು ತಡರಾತ್ರಿ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರು ಹೃದಯಾಘಾತದಿಂದ ನಿಧನರಾಗಿದ್ದರು.ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಪ್ರಧಾನಿ ಮೋದಿ, ರಾಷ್ಟ್ರಪತಿ ಮುರ್ಮು ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದು, ಸಂತಾಪ ಸೂಚಿಸಿದ್ದಾರೆ.

ನಾಳೆ ಅವರ ಹುಟ್ಟೂರಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆಗೆ ಸರ್ಕಾರ ಆದೇಶಿಸಿದೆ. ಜೊತೆಗೆ ನಾಳೆ ಒಂದು ದಿನ ರಾಜ್ಯಾಧ್ಯಂತ ಸರ್ಕಾರಿ ರಜೆಯನ್ನು ಎಸ್ ಎಂ ಕೃಷ್ಣ ಅವರ ನಿಧನದ ಹಿನ್ನಲೆಯಲ್ಲಿ ಘೋಷಿಸಲಾಗುತ್ತಿದೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

ರಾಜ್ಯಾದ್ಯಂತ 3 ದಿನ ಶೋಕಾಚರಣೆ

ಮಾಜಿ ಸಿಎಂ S.M ಕೃಷ್ಣ ನಿಧನರಾದ ಹಿನ್ನೆಲೆ ಇಂದಿನಿಂದ ಮೂರು ದಿನ ರಾಜ್ಯಾದ್ಯಂತ ಶೋಕಾಚರಣೆ ಘೋಷಿಸಲಾಗಿದೆ. ಹಾಗೂ ಸಕಲ ಸರ್ಕಾರಿ ಗೌರವಗಳೊಂದಿಗೆ ಎಸ್ ಎಂ ಕೃಷ್ಣ ಅಂತ್ಯಕ್ರಿಯೆ ನಡೆಸಲು ಸರ್ಕಾರ ಆದೇಶ ಹೊರಡಿಸಿದೆ.

ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಹಾಗೂ ಮಾಜಿ ಕೇಂದ್ರ ಸಚಿವರಾಗಿದ್ದ ಶ್ರೀ ಎಸ್ ಎಂ ಕೃಷ್ಣ ರವರು ದಿನಾಂಕ: 10.12.2024ರ ಮಂಗಳವಾರದಂದು ಪೂರ್ವಾಹ್ನ 02:30ಕ್ಕೆ ನಿಧನರಾದ ವಿಷಯವನ್ನು ಕರ್ನಾಟಕ ರಾಜ್ಯ ಸರ್ಕಾರವು ತೀವ್ರ ಸಂತಾಪದಿಂದ ಈ ಮೂಲಕ ಪ್ರಕಟಿಸಿದೆ.ಹುಟ್ಟೂರಾದ ಮಂಡ್ಯ ಜಿಲ್ಲೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದು ಮತ್ತು ದಿನಾಂಕ:10.12.2024 ರಿಂದ 12.12.2024 ರವರೆಗೆ (ಉಭಯ ದಿನಗಳು ಸೇರಿ) ಮೂರು ದಿನಗಳು ಶೋಕವನ್ನು ಆಚರಿಸಲಾಗುವುದು. ಈ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳು ಇರುವುದಿಲ್ಲ. ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳು ಮೇಲೆ ರಾಷ್ಟ್ರ ಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುವುದು ಎಂದು ಸರ್ಕಾರ ಅಧಿಸೂಚನೆ ಹೊರಡಿಸಿದೆ.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading