ಚಿತ್ರದುರ್ಗಡಿ.10:
ಮಾಜಿ ಮುಖ್ಯಮಂತ್ರಿ ಸೋಮನಹಳ್ಳಿ ಮಲ್ಲಯ್ಯ ಕೃಷ್ಣ ಅವರು ಇಂದು ನಮ್ಮನ್ನಗಲಿರುವುದು ತುಂಬಾ ದುಃಖದ ಸಂಗತಿಯಾಗಿದೆ ಎಂದು ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಕಳೆದ 3-4 ತಿಂಗಳ ಹಿಂದೆ ಎಸ್.ಎಂ.ಕೃಷ್ಣ ಅವರು ನನಗೆ ಒಂದು ವಿಮಾನ ಪ್ರಯಾಣದ ಸಂದರ್ಭದಲ್ಲಿ ನಾನು ಭೇಟಿ ಮಾಡಿದ್ದೆ. ಆಗ ಎಸ್.ಎಂ.ಕೃಷ್ಣ ಅವರು ನನಗೆ ಸಾಕಷ್ಟು ರಾಜಕೀಯ ಮಾರ್ಗದರ್ಶನ ಮತ್ತು ಜನಸೇವೆಯ ಬಗ್ಗೆ ಹಿತವಚನ ನೀಡಿ, ಪ್ರಚಲಿತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ನಾನು ಅವರಿಂದ ಆಶೀರ್ವಾದ ಪಡೆದ ನಾನೇ ಪುಣ್ಯವಂತ ಎಂದು ಭಾವಿಸುತ್ತಾ, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅವರು ತಿಳಿಸಿದ್ದಾರೆ.
About The Author
Discover more from JANADHWANI NEWS
Subscribe to get the latest posts sent to your email.