ಚಳ್ಳಕೆರೆ ಫೆ.11
ರಾಜ್ಯ ಬಿಜೆಪಿಯಲ್ಲಿ ಮತ್ತೆ ಭಿನ್ನಮತ ಸ್ಫೋಟಗೊಂಡಿದ್ದು, ಒಬ್ಬರಾದ ಮೆಲೆ ಒಬ್ಬರು ಬಹಿರಂಗವಾಗಿಯೇ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ.
ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮಾಜಿ ಸಚಿವರಾದ ರಮೇಶ್ ಜಾರಕಿಹೊಳಿ, ಹಾಗೂ ಶ್ರೀರಾಮುಲು ನಂತರ ಇದೀಗ ವಿಜಯೇಂದ್ರ ವಿರುದ್ಧ ಮತ್ತೊಬ್ಬ ಮಾಜಿ ಸಚಿವ ಹಾಗೂ ಹಾಲಿ ಸಂಸದ ಡಾ. ಕೆ. ಸುಧಾಕರ್ ಅವರು ಬಹಿರಂಗವಾಗಿಯೇ ಗುಡುಗಿದ್ದಾರೆ.
ಚಿಕ್ಕಬಳ್ಳಾಪುರ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸಂದೀಪ್ ಅವರನ್ನು ಆಯ್ಕೆ ಮಾಡಿರುವುದರಿಂದ ಸಿಡಿದೆದ್ದಿರುವ ಸುಧಾಕರ್ ಇಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಬಹಿರಂಗವಾಗಿಯೇ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದ ಬೆನ್ನಲ್ಲೆ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ನೇರಲಗುಂಟೆ ತಿಪ್ಪೇಸ್ವಾಮಿ ಮಂಡಲ ಅಧ್ಯಕ್ಷರ ಆಯ್ಕೆ ವೀಚಾರವಾಗಿ ಬಿಜೆಪಿ ವರುಷ್ಠರ ವಿರುದ್ದ ಅಕ್ರೋಶ ಹೊರ ಹಾಕಿದ್ದಾರೆ.
ಚುನಾವಣೆ ಸಂದರ್ಭದಲ್ಲಿ ನಾಯಕ ಸಮಯದಾಯ ಬೇಕು ನಾನು ಮಾಜಿ ಶಾಸಕನಾಗಿ ನಾನು ಪಕ್ಷದ ಕಾರ್ಯಕರ್ತನ ಹೆಸರನ್ನು ಸೂಚನೆ ಮಾಡಿದ್ದೆ ಆದರೆ ನನ್ನ ಮಾತಿಗೆ ಬೆಲೆ ಕೊಡದೆ ಬೇರೆಯವರಿಗೆ ನೀಡಿ ಜಾತಿ ಜಾತಿ ಮಧ್ಯೆ ಮುಸುಕಿನ ಜಗಳಕ್ಕೆ ದಾರಿ ಮಾಡಿಕೊಟ್ಟಿದೆ ಇದು ಮತ್ತಷ್ಟು ಬಿಜೆಪಿ ಪಕ್ಷದಲ್ಲಿ ಬಿರುಕು ಕಾಣಲಿದೆ ಎಂದು ನಗರದ ಪ್ರವಾಸಿ ಮಂದಿರದಲ್ಲಿ ಬಿಜೆಪಿ ಜಿಲ್ಲಾ ಹಾಗೂ ಮಂಡಲ ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ಅಕ್ರೋಶ ಹೊರ ಹಾಕಿದ್ದಾರೆ.
About The Author
Discover more from JANADHWANI NEWS
Subscribe to get the latest posts sent to your email.