ನಾಯಕನಹಟ್ಟಿ : ಹೋಬಳಿಯ ಜಾಗನೂರಹಟ್ಟಿ ಗ್ರಾಮದ ವಾಸಿಯಾದ ರೋಜ ಎಂಬ ಬಾಣಂತಿ ಸಾವನ್ನು ಖಂಡಿಸಿ ಹೆರಿಗೆ ವೈದ್ಯರ ಮೇಲೆ ಸೂಕ್ತ ಕ್ರಮ ಜರುಗಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ಸೇನೆ ವತಿಯಿಂದ ಜಿಲ್ಲಾ ವೈದ್ಯಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಪತ್ರವನ್ನು ಸಲ್ಲಿಸಿದರು.
ನಂತರ ಕರವೇ ಕನ್ನಡ ಸೇನೆ ರಾಜ್ಯಧ್ಯಕ್ಷ ಅರುಣ್ ಕುಮಾರ್ ಮಾತನಾಡಿ ಬಾಣಂತಿ ರೋಜಾ ಜಾಗನೂರಹಟ್ಟಿ ವಾಸಿಯಾಗಿದ್ದು, ದಿನಾಂಕ 31-10-2024 ರಂದು ಜಿಲ್ಲಾ ಆಸ್ಪತ್ರೆ ಚಿತ್ರದುರ್ಗದಲ್ಲಿ ಹೆರಿಗೆಗೆ ದಾಖಲಾಗಿದ್ದು, ಹೆರಿಗೆ ವೈದ್ಯರಾದ ಡಾ.ರೂಪಶ್ರೀ ಶಸ್ತ್ರ ಚಿಕಿತ್ಸೆ ಮಾಡಿ 5 ದಿನಗಳ ಕಾಲ ಒಳ ರೋಗಿಯಾಗಿ ದಾಖಲಿಸಿಕೊಂಡು ನಂತರ ಡಿಸ್ಚಾರ್ಜ್ ಮಾಡಿದ್ದಾರೆ. 5 ರಿಂದ 6 ದಿನಗಳ ನಂತರ ಆಸ್ಪತ್ರೆಗೆ ಬಂದು ಶಸ್ತ್ರ ಚಿಕಿತ್ಸೆ ಮಾಡಿರುವುದನ್ನು ಪರೀಕ್ಷಿಸಿಕೊಂಡು ಹೋಗಿದ್ದಾರೆ.ಸುಮಾರು 40 ದಿನ ಕಳೆದರೂ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡಿರುವ ಗಾಯ ವಾಸಿಯಾಗಿರುವುದಿಲ್ಲ. ಕೀವು ತುಂಬಕೊಂಡು ನರಳಾಡಿ, ಶಸ್ತ್ರಚಿಕಿತ್ಸೆ ಮಾಡಿದ ಜಾಗದಲ್ಲಿ ರಕ್ಷಸ್ತಾವವಾಗಿ, ನೋವಿನಿಂದ ಸುಸ್ತಾಗಿ ಬಾಣಂತಿ ರೋಜ ಸಾವಿಗಿಡಾಗಿದ್ದು, ಇದರಲ್ಲಿ ವೈದ್ಯರ ನಿರ್ಲಕ್ಷತನ ಮೇಲ್ನೋಟಕ್ಕೆ ಎದ್ದು ಕಾಣುತ್ತಿದೆ. 40 ದಿನ ಕಳೆದರೂ ಶಸ್ತ್ರ ಚಿಕಿತ್ಸೆ ಗಾಯ ವಾಸಿಯಾಗದೆ ಕೀವು ಹಾಗೂ ರಕ್ತ ಸೋರಿಕೆ ಆಗಿರುವುದನ್ನು ನೋಡಿದರೆ ವೈದ್ಯರು ನೀಡಿರುವ ಚಿಕಿತ್ಸೆಯ ಬಗ್ಗೆ ತುಂಬಾ ಅನುಮಾನವಿದೆ. ಸರ್ಕಾರ ತನಿಖೆ ನಡೆಸಿ ವೈದ್ಯರ ವಿರುದ್ಧ ಸೂಕ್ತ ಕ್ರಮ ಜರುಗಿಸಿ ಮೃತ ಬಾಣಂತಿಗೆ ಪರಿಹಾರ ದೊರಕಿಸಿಕೊಡಬೇಕೆಂದು ಆಗ್ರಹಿಸಿದರು.
ನಂತರ ಕರವೇ ಕನ್ನಡ ಸೇನೆ ಜಿಲ್ಲಾಧ್ಯಕ್ಷ ರವಿಕುಮಾರ್ ನಾಯ್ಕ್ ಮಾತನಾಡಿ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರಿಗೆ ಕೇಳಿದಷ್ಟು ಹಣ ಕೊಟ್ಟರೆ ಮಾತ್ರ ಉತ್ತಮ ಚಿಕಿತ್ಸೆ ದೊರೆಯುತ್ತದೆ. ಇಲ್ಲವಾದಲ್ಲಿ ಬೇಕಾಬಿಟ್ಟಿ ಚಿಕಿತ್ಸೆ ನೀಡುತ್ತಾರೆ. ಇತ್ತೀಚಿನ ದಿನಗಳಲ್ಲಿ ವೈದ್ಯರು ಖಾಸಗಿ ಕ್ಲಿನಿಕ್ ಗಳನ್ನು ಮಾಡಿಕೊಂಡು ಹೆಸರಿಗೆ ಮಾತ್ರ ಸರ್ಕಾರಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಾ, ಆಸ್ಪತ್ರೆಗೆ ಬರುವ ರೋಗಿಗಳನ್ನು ತಮ್ಮ ಕ್ಲಿನಿಕ್ ಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುವಂತೆ. ಚಿಕಿತ್ಸಾ ವಿಧಾನಗಳಲ್ಲಿ ತಾರತಮ್ಯ ವ್ಯಸಗಿ ರೋಗಿಗಳಿಗೆ ಸರಿಯಾಗಿ ಸ್ಪಂದಿಸದೆ, ಸರ್ಕಾರಿ ಆಸ್ಪತ್ರೆಗಳಲ್ಲಿ ಬೇಕಾಬಿಟ್ಟಿ ಚಿಕಿತ್ಸೆ ನೀಡುತ್ತಾರೆ. ಅಂಥವರ ವಿರುದ್ಧ ಸೂಕ್ತ ಕ್ರಮ ಜರುಗಿಸಿ ಇಂಥ ಘಟನೆಗಳು ಮರುಕಳೆಸದಂತೆ ಸರ್ಕಾರ ಕಟ್ಟುನಿಟ್ಟಿನ ಆದೇಶ ಹೊರಡಿಸಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಉಪಸ್ಥಿತರಾದ ಸಂಘಟನಾ ಕಾರ್ಯದರ್ಶಿ ಓಬಣ್ಣ, ರಾಜ್ಯ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಸೈಯದ್ ಅಲಿ, ಸೋಶಿಯಲ್ ಮೀಡಿಯಾ ಅಧ್ಯಕ್ಷ ಅರುಣ್ ಕುಮಾರ್, ತಾಲ್ಲೂಕು ನಗರ ಘಟಕ ಅಧ್ಯಕ್ಷ ಮಂಜುನಾಥ್, ಹಿರಿಯೂರು ತಾಲ್ಲೂಕು ಅಧ್ಯಕ್ಷ ರಫಿ, ರಾಜ್ಯ ಸಂಘಟನಾ ಕಾರ್ಯದರ್ಶಿಯಾದ ಅಶೋಕ ಕನ್ನಡಿಗ, ಮಹಿಳಾ ರೈತ ಘಟಕ ರಾಜ್ಯಾಧ್ಯಕ್ಷರಾದ ಅಶ್ವಿನಿ ಟಗರು, ರಾಜ್ಯ ಉಪಾಧ್ಯಕ್ಷರಾದ ಲಕ್ಷ್ಮಿ,ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಸುವರ್ಣಮ್ಮ, ರಾಜ್ಯ ಕಾರ್ಯದರ್ಶಿಯಾದ ಕೆಂಪೇಗೌಡ, ಹೋಬಳಿ ಅಧ್ಯಕ್ಷರಾದ ಮುತ್ತಯ್ಯ, ಹೋಬಳಿ ಘಟಕದ ಮಹಿಳಾ ಅಧ್ಯಕ್ಷೆ ತಿಪ್ಪಮ್ಮ,ನಗರ ಘಟಕ ಅಧ್ಯಕ್ಷ ತಿಪ್ಪೇಸ್ವಾಮಿ, ಉಪಾಧ್ಯಕ್ಷರು ಮಂಜುನಾಥ್, ಹೋಬಳಿ ಉಪಾಧ್ಯಕ್ಷರು ರಾಘವೇಂದ್ರ, ಸಂಘಟನಾ ಕಾರ್ಯದರ್ಶಿ, ಶಿವಮೂರ್ತಿ ಹಾಗೂ ಎಲ್ಲಾ ಸಂಘಟನೆಯ ಪದಾಧಿಕಾರಿಗಳು ಹಾಜರಿದ್ದರು.
About The Author
Discover more from JANADHWANI NEWS
Subscribe to get the latest posts sent to your email.