January 30, 2026
IMG-20250112-WA01631.jpg

ಚಳ್ಳಕೆರೆ/ಹಿರಿಯೂರು : ನಗರದ  ಸೋಮವಾರ ಬೆಳಿಗ್ಗೆ 10 ಗಂಟೆಗೆ ಚಳ್ಳಕೆರೆ ನಗರದ ಬೆಂಗಳೂರು ರಸ್ತೆಯ ಛೇಂಬರ್ ಆಫ್ ಕಾಮಾರ್ಸ್ ಸಂಭಾಗಣದಲ್ಲಿ ಹಾಗೂ ಹಿರಿಯೂರು ನಗರದ ಗುರುಭವನದಲ್ಲಿ ಬೆಳಗ್ಗೆ 11 ಗಂಟೆಗೆ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಹಾಲು ಒಕ್ಕೂಟದ ನಿರ್ದೇಶಕ ಬಿ.ಸಿ. ಸಂಜೀವ ಮೂರ್ತಿತಿಳಿಸಿದ್ದಾರೆ.

ಈ ಕಾರ್ಯಕ್ರಮದಲ್ಲಿ ಶಿಮೂಲ್ ನಿರ್ದೇಶಕರಾದ ಬಿಸಿ. ರೇವಣಸಿದ್ದಪ್ಪ , ಜಿಬಿ ಶೇಖರಪ್ಪ ಭಾಗವಹಿಸಲಿದ್ದಾರೆ. ಹೊಸ ವರ್ಷ ಹಾಗೂ ಸಂಕ್ರಾಂತಿ ಹಬ್ಬದ ಶುಭಾಶಯಗಳು ಕೋರಿ ಕ್ಯಾಲೆಂಡರ್ ಬಿಡುಗಡೆ ಮಾಡಲಾಗುತ್ತದೆ. ನಂತರ ಸಂಕ್ರಾಂತಿ ಹಬ್ಬದ ಸಿಹಿ ವಿತರಿಸಲಾಗುವುದು. ಆಗಾಗಿ
ತಾಲೂಕಿನ ಎಲ್ಲಾ ಹಾಲು ಉತ್ಪಾದಕ ಸಹಕಾರ ಸಂಘಗಳ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಬಿಸಿ. ಸಂಜೀವ ಮೂರ್ತಿ ಅವರು ಮನವಿ ಮಾಡಿದ್ದಾರೆ.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading