January 29, 2026
IMG-20250212-WA0188.jpg

ವರದಿ: ಕೆ.ಟಿ.ಮೋಹನ್ ಕುಮಾರ್

ಮಂಡ್ಯ: ಮೈಸೂರು ಜಿಲ್ಲಾ ಉಪ್ಪಾರ ನೌಕರರ ಮತ್ತು ವೃತ್ತಿಪರರ ಸಂಘದ ವತಿಯಿಂದ 2024ನೇ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳಲ್ಲಿ ಶೇಕಡ 85ಕ್ಕಿಂತ ಹೆಚ್ಚು ಅಂಕ ಗಳಿಸಿರುವ ಉಪ್ಪಾರ ಸಮಾಜದ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ ಎಂದು ಮಂಡ್ಯ ಜಿಲ್ಲಾ ಶ್ರೀ ಜೈ ಭಗೀರಥ ಉಪ್ಪಾರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ನಾಗರತ್ನಮ್ಮ ತಿಳಿಸಿದ್ದಾರೆ.

ಅವರು ಈ ಕುರಿತು ಪತ್ರಿಕಾ ಹೇಳಿಕೆಯನ್ನು ನೀಡಿ ವಿವಿಧ ಕ್ಷೇತ್ರಗಳ ಸಾಧಕರು, ಬಡ್ತಿ ಹೊಂದಿದ ಮತ್ತು ನಿವೃತ್ತ ನೌಕರರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಮಾರ್ಚ್ 9ರಂದು ಮೈಸೂರಿನ ಕಲಾಮಂದಿರದಲ್ಲಿ ಆಯೋಜಿಸಲಾಗಿದೆ.

ಪ್ರತಿಭಾ ಪುರಸ್ಕಾರಕ್ಕೆ ಮಂಡ್ಯ, ಮೈಸೂರು, ಕೊಡಗು ಹಾಗೂ ಚಾಮರಾಜನಗರ ಜಿಲ್ಲೆಗಳ ಅರ್ಹ ವಿದ್ಯಾರ್ಥಿಗಳು ಫೆಬ್ರವರಿ 17ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ವಿದ್ಯಾರ್ಥಿಗಳು ಜಾತಿ ದೃಢೀಕರಣ ಪತ್ರ, ಅಂಕಪಟ್ಟಿ ಜೆರಾಕ್ಸ್, ಭಾವಚಿತ್ರ ಹಾಗೂ ತಮ್ಮ ಮೊಬೈಲ್ ನಂಬರನ್ನು ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬಹುದು.
ವಿಳಾಸ: ಲಿಂಗಣ್ಣ, ನಂ.2793, 2ನೇ ಮುಖ್ಯ ರಸ್ತೆ, 2ನೇ ಕ್ರಾಸ್, ಜಯನಗರ, ಮೈಸೂರು -570014

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading