September 16, 2025
1744463470732.jpg


ಹಿರಿಯೂರು :
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಪರಿಶ್ರಮವಿದ್ದು, ಸರ್ಕಾರವು ಇದೀಗ ಪಕ್ಷಕ್ಕಾಗಿ ದುಡಿಯುತ್ತಿರುವ ಕಾರ್ಯಕರ್ತರ ಕಡೆ ಗಮನವನ್ನು ಹರಿಸುತ್ತಿದೆ ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಹೇಳಿದರು.
ನಗರದ ಬ್ಲಾಕ್ ಕಾಂಗ್ರೆಸ್ ಕಛೇರಿಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ “ಸರ್ಕಾರದ ನಡೆ ಕಾರ್ಯಕರ್ತರ ಕಡೆ” ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಮಾಜಿ ಸಂಸದರಾದ ಬಿ.ಎನ್.ಚಂದ್ರಪ್ಪ, ಶಾಸಕರಾದ ಟಿ.ರಘುಮೂರ್ತಿ,ಕೆ.ಪಿಸಿ.ಸಿ ಪ್ರಧಾನಕಾರ್ಯದರ್ಶಿಗಳಾದ ಎಸ್.ವಿಜಯ್ ಕುಮಾರ್, ಜಿಲ್ಲಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಕೆ ತಾಜ್ ಪೀರ್, ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷರುಗಳಾದ ಶ್ರೀಮತಿ ಶಶಿಕಲಾಸುರೇಶ್ ಬಾಬು, ಶ್ರೀಮತಿ ಗೀತಾನಾಗಕುಮಾರ್, ಜಿಲ್ಲಾ ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಮತಿ ಗೀತಾನಂದಿನಿಗೌಡ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಆರ್.ಶಿವಣ್ಣ, ನಗರಸಭಾ ಅಧ್ಯಕ್ಷರಾದ ಅಜಯ್ ಕುಮಾರ್, ಹಿರಿಯೂರು ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಖಾದಿ ರಮೇಶ್, ಈರಲಿಂಗೇಗೌಡ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಪದಾಧಿಕಾರಿಗಳು, ಎಲ್ಲಾ ನಗರಸಭಾ ಸದಸ್ಯರುಗಳು, ಹಾಲಿ ಮಾಜಿ ಚುನಾಯಿತ ಪ್ರತಿನಿಧಿಗಳು, ಮುಖಂಡರುಗಳು ಹಾಗೂ ಕಾರ್ಯಕರ್ತರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading