
ನಾಯಕನಹಟ್ಟಿ:: ಚಳ್ಳಕೆರೆ ನಗರದ ಬಾಪೂಜಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಯಕನಹಟ್ಟಿ ಹೋಬಳಿಯ ನಲಗೇತನಹಟ್ಟಿ ಗ್ರಾಮದ ಶಿಕ್ಷಕ ಜಿ. ಬಿ. ಮುತ್ತಯ್ಯ ರವರು ಇತ್ತೀಚಿಗೆ ಅನಾರೋಗ್ಯದಿಂದ ಬಳಲುತ್ತಿದ್ದರು. ಗುರುವಾರ ತಡರಾತ್ರಿ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ ಕುಟುಂಬಸ್ಥರು ಚಿತ್ರದುರ್ಗದ ಬಸವೇಶ್ವರ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೂಯ್ದಿದ್ದಾರೆ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ.
ಮೃತರಿಗೆ ಹೆಂಡತಿ ಇಬ್ಬರು ಮಕ್ಕಳನ್ನು ಹಾಗೂ ಅಪಾರ ಬಂಧು ಬಳಗವನ್ನು ಬಿಟ್ಟು ವಿಧಿವಶ ಸೇರಿದ್ದಾರೆ.
ಮೃತರ ಅಂತ್ಯಸಂಸ್ಕಾರವನ್ನು ನಲಗೇತನಹಟ್ಟಿ ಗ್ರಾಮದ ತೋಟದಲ್ಲಿ ಮಧ್ಯಾಹ್ನ 2 ಗಂಟೆಗೆ ನೆರವೇರಿಸಲು ಕುಟುಂಬಸ್ಥರು ತಿಳಿಸಿದ್ದಾರೆ.
About The Author
Discover more from JANADHWANI NEWS
Subscribe to get the latest posts sent to your email.