
ಹಿರಿಯೂರು:
ಮಧ್ಯಕರ್ನಾಟಕ ರೈತರ ಏಕೈಕ ಜೀವನಾಡಿ ವಾಣಿವಿಲಾಸ ಜಲಾಶಯದ ನೀರಿನಮಟ್ಟ ಮಂಗಳವಾರದಂದು 127.75 ಅಡಿಗೆ ಏರಿಕೆಯಾಗಿದೆ. ವಾಣಿವಿಲಾಸ ಜಲಾಶಯಕ್ಕೆ ಭದ್ರಾ ಜಲಾಶಯದಿಂದ ಪ್ರತಿದಿನ 924 ಕ್ಯೂಸೆಕ್ ನೀರಿನ ಒಳಹರಿವು ಇದೆ.
ತರೀಕೆರೆ ಸಮೀಪದ ಬೆಟ್ಟದತಾವರೆಕೆರೆ ಸಮೀಪ ಇರುವ ಪಂಪ್ ಹೌಸ್ ನಿಂದ ಪ್ರತಿನಿತ್ಯ ಒಂದು ಪಂಪ್ ರನ್ ಮಾಡಿ ವಾಣಿವಿಲಾಸ ಸಾಗರ ಜಲಾಶಯಕ್ಕೆ ನೀರು ಹರಿಸಲಾಗುತ್ತಿರುವುದರಿಂದ ಸುಮಾರು 700 ಕ್ಯೂಸೆಕ್ ನೀರು ಹರಿದು ಬರುತ್ತಿದೆ ಎನ್ನಲಾಗಿದೆ.
ಇನ್ನು ವಾಣಿವಿಲಾಸ ಜಲಾಶಯದ ನೀರಿನ ಸಂಗ್ರಹ ಸಾಮರ್ಥ್ಯ ಒಟ್ಟು 135 ಅಡಿ ಆಗಿದ್ದು, ಜಲಾಶಯ 130 ಅಡಿಗೆ ಕೋಡಿ ಹರಿಯಲಿದೆ. ಇದೀಗ ಜಲಾಶಯದಲ್ಲಿ 30ಟಿ.ಎಂ.ಸಿ. ಅಡಿ ನೀರು ಸಂಗ್ರಹವಾಗುವ ಸಾಮರ್ಥ್ಯವನ್ನು ಹೊಂದಿದೆ.
About The Author
Discover more from JANADHWANI NEWS
Subscribe to get the latest posts sent to your email.