September 15, 2025
FB_IMG_1731416145100.jpg


ಹಿರಿಯೂರು:
ಮಧ್ಯಕರ್ನಾಟಕ ರೈತರ ಏಕೈಕ ಜೀವನಾಡಿ ವಾಣಿವಿಲಾಸ ಜಲಾಶಯದ ನೀರಿನಮಟ್ಟ ಮಂಗಳವಾರದಂದು 127.75 ಅಡಿಗೆ ಏರಿಕೆಯಾಗಿದೆ. ವಾಣಿವಿಲಾಸ ಜಲಾಶಯಕ್ಕೆ ಭದ್ರಾ ಜಲಾಶಯದಿಂದ ಪ್ರತಿದಿನ 924 ಕ್ಯೂಸೆಕ್ ನೀರಿನ ಒಳಹರಿವು ಇದೆ.
ತರೀಕೆರೆ ಸಮೀಪದ ಬೆಟ್ಟದತಾವರೆಕೆರೆ ಸಮೀಪ ಇರುವ ಪಂಪ್ ಹೌಸ್ ನಿಂದ ಪ್ರತಿನಿತ್ಯ ಒಂದು ಪಂಪ್ ರನ್ ಮಾಡಿ ವಾಣಿವಿಲಾಸ ಸಾಗರ ಜಲಾಶಯಕ್ಕೆ ನೀರು ಹರಿಸಲಾಗುತ್ತಿರುವುದರಿಂದ ಸುಮಾರು 700 ಕ್ಯೂಸೆಕ್ ನೀರು ಹರಿದು ಬರುತ್ತಿದೆ ಎನ್ನಲಾಗಿದೆ.
ಇನ್ನು ವಾಣಿವಿಲಾಸ ಜಲಾಶಯದ ನೀರಿನ ಸಂಗ್ರಹ ಸಾಮರ್ಥ್ಯ ಒಟ್ಟು 135 ಅಡಿ ಆಗಿದ್ದು, ಜಲಾಶಯ 130 ಅಡಿಗೆ ಕೋಡಿ ಹರಿಯಲಿದೆ. ಇದೀಗ ಜಲಾಶಯದಲ್ಲಿ 30ಟಿ.ಎಂ.ಸಿ. ಅಡಿ ನೀರು ಸಂಗ್ರಹವಾಗುವ ಸಾಮರ್ಥ್ಯವನ್ನು ಹೊಂದಿದೆ.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading