
ವರದಿ: ಕೆ.ಟಿ.ಮೋಹನ್ ಕುಮಾರ್
ಕೆ.ಆರ್.ನಗರ (ಮೈಸೂರು ಜಿಲ್ಲೆ): ತಾಲೂಕಿನ ಗಂಧನಹಳ್ಳಿ ಗ್ರಾಮದಲ್ಲಿ ನ.13ರ ಬುಧವಾರ ಸುಮಾರು 89.56ಲಕ್ಷ ರೂಗಳ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕರಾದ ಡಿ.ರವಿಶಂಕರ್ ಅವರು ಚಾಲನೆ ನೀಡಲಿದ್ದಾರೆ ಎಂದು ಶಾಸಕರ ಆಪ್ತ ಸಹಾಯಕ ನವೀನ್ ತಿಳಿಸಿದ್ದಾರೆ.
25 ಲಕ್ಷ ರೂಗಳ ವೆಚ್ಚದಲ್ಲಿ ಗ್ರಾಮದ ಶಿವಯ್ಯರವರ ಮನೆಯಿಂದ ಅಂಗಡಿ ರೇವಣ್ಣರವರ ಮನೆಯವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿ, 35ಲಕ್ಷ ರೂಗಳ ವೆಚ್ಚದಲ್ಲಿ ಗ್ರಾಮದ ಬಲರಾಮರವರ ಮನೆಯಿಂದ ಮಂಜುನಾಯಕ ಅವರ ಮನೆಯವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿ, 5ಲಕ್ಷ ರೂಗಳ ವೆಚ್ಚದಲ್ಲಿ ಗ್ರಾಮದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಅಭಿವೃದ್ಧಿ ಕಾಮಗಾರಿ, 5ಲಕ್ಷ ರೂಗಳ ವೆಚ್ಚದಲ್ಲಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಟ್ಟಡ ನಿರ್ಮಾಣ ಕಾಮಗಾರಿ,19.56 ಲಕ್ಷ ರೂಗಳ ವೆಚ್ಚದಲ್ಲಿ ಗ್ರಾಮ ಪಂಚಾಯಿತಿ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಲಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
About The Author
Discover more from JANADHWANI NEWS
Subscribe to get the latest posts sent to your email.