ಚಳ್ಳಕೆರೆ ನ.12 ಸರ್ಕಾರಿ ಗೋಮಾಳ ಸಾರ್ವಜನಿಕ ಸದುದ್ದೇಶಕ್ಕೆ ಮೀಸಲಿಟ್ಟ ಭೂಮಿ ಒತ್ತುವರಿ ಮಾಡಿಕೊಂಡರೆ ನಿರ್ದಾಕ್ಷಿಣ್ಯವಾಗಿ ಕ್ರಮಜರುಗಿಸಲಾಗುವುದು ಎಂದು ತಹಶೀಲ್ದಾರ್ ರೇಹಾನ್ ಪಾಷ ಎಚ್ಚರಿಕೆ ನೀಡಿದ್ದಾರೆ



ಹೌದು ತಾಲೂಕಿನ ಬಹುತೇಕ ಕಡೆ ಸರಕಾರಿ ಗೋಮಾಳ. ಸ್ಮಶಾನ. ಸಾರ್ವಜನಿಕ ರಸ್ತೆ ಒತ್ತುವರಿ ಮಾಡಿಕೊಂಡು ಮನೆ ಹಾಗೂ ಉಳುಮೆ ಮಾಡಿಕೊಂಡವರ ಮೇಲೆ ಕಾನೂನು ಕ್ರಮ ಕೈಕೊಳ್ಳುವುದಾಗಿ ಅಕ್ರಮ ಒತ್ತುವರಿದಾರರಿಗೆ ನೋಟಿಸ್ ಜಾರಿ ಮಾಡುವುದಾಗಿ ಕಡಕ್ ಸೂಚನೆ ನೀಡಿದ್ದಾರೆ.
ಸಿದ್ದಾಪುರ ಗ್ರಾಮದ ರಾಷ್ಟ್ರೀಯ ಹೆದ್ದಾರಿ ಸಮೀಪವೇ ಸರಕಾರಿ ಸರ್ವೆ ನಂಬರ್ 64 ರಲ್ಲಿ ಬೇಕಾ ಬಿಟ್ಟಿ ಜಾಗ ಅಕ್ರಮಿಸಿಕೊಂಡು ಮನೆಗಳನ್ನು ನಿರ್ಮಿಸಿಕೊಂಡ ಸ್ಥಳಕ್ಕೆ ತಹಶೀಲ್ದಾರ್ ರೇಹಾನ್ ಪಾಷ.ತಾಪಂ ಇಒ ಶಶಿಧರ್. ಪೋಲಿಸ್ ಠಾಣಾಧಿಕಾರಿ ಕೆ.ಕುಮಾರ್ ಭೇಟಿ ನೀಡಿ ಒತ್ತುವರಿ ಮಾಡಿಕೊಂಡವರಿಗೆ ನೋಟಿಸ್ ಜಾರಿ ಮಾಡಿ ಒತ್ತುವರಿ ತೆರವುಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
About The Author
Discover more from JANADHWANI NEWS
Subscribe to get the latest posts sent to your email.