January 30, 2026
IMG-20250113-WA0142.jpg

ವರದಿ: ಕೆ.ಟಿ.ಮೋಹನ್ ಕುಮಾರ್

ಸಾಲಿಗ್ರಾಮ (ಮೈಸೂರು ಜಿಲ್ಲೆ): ಇತ್ತೀಚಿನ ದಿನಗಳಲ್ಲಿ ಡಿಜಿಟಲೀಕರಣಕ್ಕೆ ಹೆಚ್ಚು ಮಹತ್ವವಿದ್ದು ಇಂತಹ ಸಂದರ್ಭದಲ್ಲಿ ಛಾಯಾಗ್ರಾಹಕರು ತಮ್ಮ ಬದುಕನ್ನು ಕಟ್ಟಿಕೊಳ್ಳಲು ಅನುಕೂಲವಾಗುವಂತೆ ಅವರ ವೃತ್ತಿಗೆ ಅಗತ್ಯವಿರುವ ಸಾಮಗ್ರಿಗಳಿಗೆ ಸರ್ಕಾರವು ಸಬ್ಸಿಡಿ ರೂಪದಲ್ಲಿ ವಿವಿಧ ಸಾಲ ಸೌಲಭ್ಯಗಳನ್ನು ಕಲ್ಪಿಸಿ ಕೊಡಬೇಕು ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಸಾ.ರಾ.ನಂದೀಶ್ ಹೇಳಿದರು.

ಅವರು ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲೂಕು ಫೋಟೋ ಮತ್ತು ವಿಡಿಯೋ ಗ್ರಾಫರ್ ಗಳ ಅಸೋಸಿಯೇಷನ್ ವತಿಯಿಂದ ಆಯೋಜಿಸಿದ್ದ 2025ನೇ ಸಾಲಿನ ಕ್ಯಾಲೆಂಡರ್ ಮತ್ತು ಡೈರಿ ಬಿಡುಗಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಜನಪ್ರತಿನಿಧಿಗಳು ಹಾಗೂ ಅಧಿಕಾರಿ ವರ್ಗದವರ ಗಮನ ಸೆಳೆಯುವ ಮೂಲಕ ತಮಗೆ ದೊರಕಬೇಕಾದ ಸರ್ಕಾರದ ವಿವಿಧ ಸೌಲಭ್ಯಗಳನ್ನು ಪಡೆದುಕೊಳ್ಳಲು ಛಾಯಾಗ್ರಾಹಕರು ಸಂಘಟಿತರಾಗಬೇಕು. ಆ ಮೂಲಕ ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ಪಡೆದುಕೊಂಡು ತಮ್ಮ ವೃತ್ತಿ ಬದುಕಿನಲ್ಲಿ ಆಧುನಿಕತೆಗೆ ಹೆಚ್ಚಿನ ಗಮನವನ್ನು ಹರಿಸುವ ಮೂಲಕ ಉತ್ತಮ ಛಾಯಾಗ್ರಾಹಕರು ಎಂಬ ಹೆಗ್ಗಳಿಕೆಗೆ ಪಾತ್ರರಾಗಬೇಕೆಂದು ಕಿವಿಮಾತು ಹೇಳಿದರು.

ಪ್ರಸ್ತುತ ದಿನಗಳಲ್ಲಿ ಫೋಟೋ ಮತ್ತು ವಿಡಿಯೋ ಕ್ಯಾಮೆರಾಗಳ ಬೆಲೆಯು ದುಬಾರಿಯಾಗಿದ್ದು ಅವುಗಳ ಮೇಲೆ ವಿಮೆಯನ್ನು ಮಾಡಿಸಿಕೊಳ್ಳಬೇಕು. ತಾವುಗಳು ವೃತ್ತಿ ಬದುಕಿನಲ್ಲಿ ಪ್ರತಿನಿತ್ಯ ಸಂಚಾರವನ್ನು ಮಾಡುತ್ತಿರುತ್ತೀರಾ ಎಲ್ಲರೂ ಡ್ರೈವಿಂಗ್ ಲೈಸೆನ್ಸ್ ಅನ್ನು ಕಡ್ಡಾಯವಾಗಿ ಮಾಡಿಸಿಕೊಂಡಿರಬೇಕು. ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ಕುಡಿಸುವ ಕೆಲಸಕ್ಕೆ ಮೊದಲ ಆದ್ಯತೆಯನ್ನು ನೀಡಬೇಕು ಎಂದು ಸಲಹೆ ನೀಡಿದ ಅವರು ಸಂಘದ ಸಾಮಾಜಿಕ ಸೇವಾ ಕಾರ್ಯ ಚಟುವಟಿಕೆಗಳಿಗೆ ಸದಾ ಸಹಕಾರವನ್ನು ನೀಡುತ್ತೇನೆ ಎಂದರು.

ಈ ಸಂದರ್ಭದಲ್ಲಿ ಹಲವು ಹಿರಿಯ ಛಾಯಾಗ್ರಾಹಕರುಗಳನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸತೀಶ್, ಗ್ರಾ.ಪಂ. ಅಧ್ಯಕ್ಷೆ ಫಾತಿಮಾ ಉನ್ನಿಸ, ಮಾಜಿ ಅಧ್ಯಕ್ಷೆ ಲಕ್ಷ್ಮಿ ಸೋಮಶೇಖರ್, ಮಾಜಿ ಉಪಾಧ್ಯಕ್ಷೆ ಕುಸುಮ, ಸದಸ್ಯ ರಾಂಪುರ ಲೋಕೇಶ್, ಮುಖಂಡ ಫೈನಾನ್ಸ್ ಕುಮಾರ್, ಸಂಘದ ಗೌರವಾಧ್ಯಕ್ಷ
ಆರ್.ವಿಜಯ್, ಅಧ್ಯಕ್ಷ ಎಸ್.ವಿ.ಪ್ರಸನ್ನ ಕುಮಾರ, ಉಪಾಧ್ಯಕ್ಷ ಎಸ್.ಆರ್.ಮಂಜುನಾಥ್, ಕಾರ್ಯದರ್ಶಿ ಆರ್.ರವಿ, ಖಜಾಂಚಿ ಪ್ರಕಾಶ್, ಸಹ ಕಾರ್ಯದರ್ಶಿ
ಎಸ್.ಕೆ.ವೆಂಕಟೇಶ್, ಸಂಘಟನಾ ಕಾರ್ಯದರ್ಶಿ ಎಸ್.ಪಿ.ಸಿದ್ದಾರ್ಥ, ಪತ್ರಿಕಾ ಕಾರ್ಯದರ್ಶಿ ಸಿ.ಸಿ.ಮಹದೇವ್, ನಿರ್ದೇಶಕರುಗಳಾದ
ಆರ್.ವಿಜಯ್ ಕುಮಾರ, ಎಸ್.ಎ.ಭಾರ್ಗವ,
ಎಸ್.ಎಸ್.ಶಿವ, ಆರ್.ಸಂದೇಶ, ಕೆ.ಎಲ್.ಲೋಕೇಶ್, ಸದಸ್ಯರುಗಳಾದ ರವಿ, ಸುರೇಶ್, ಎಚ್.ಕೆ.ಪ್ರಕಾಶ್, ವಿನೋದ, ಮಹೇಶ್, ಎಸ್.ವಿ.ಪ್ರಕಾಶ್,
ಕೆ.ಎನ್.ರಾಜಶೇಖರಮೂರ್ತಿ,
ಎಸ್.ಕೆ.ರವೀಶ್, ಕೆ.ಎಂ.ದುರ್ಗೇಶ್, ಎಸ್.ಎನ್.ರಂಗನಾಥ್, ಎಸ್.ಎನ್.ಭರತ, ದೇವರಾಜು,
ವಿ.ಮನು, ಕೆ.ಎಸ್.ರಾಘವೇಂದ್ರ, ರಾಕೇಶ್, ದೀಪಕ್ ರಾಜ್, ಎನ್.ಹರ್ಷಿತ್ ಕುಮಾರ್,
ಸಿ.ಎನ್.ರಾಮಕುಮಾರ್, ಕಿರಣ್, ಸಿ.ರವಿ ಸೇರಿದಂತೆ ಹಲವರು ಇದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading