ಚಳ್ಳಕೆರೆ ತಾಲೂಕಿನ ಕರ್ಲಕುಂಟೆ ಗ್ರಾಮದ ಡಾ.ಟಿ. ಮಾರಣ್ಣ ದಾವಣಗೆರೆ ವಿಶ್ವ ವಿದ್ಯಾನಿಲಯದಲ್ಲಿ ಡಾ.ಯು.ಎಸ್. ಮಹಬಲೇಶ್ವರ್ ಅವರ ಮಾರ್ಗದರ್ಶನದಲ್ಲಿ ‘ಸಿಮಿಲಾರಿಟಿ ಅಪ್ರೋಚ್ ಟು ದ ಲಾಮಿನರ್ ಬೌಂಡರಿ ಲೇಯರ್ ಇನ್ ಥಿಯರಿ ಪ್ಲೌಡ್ ಮೆಕಾನಿಕ್ಸ್’ ವಿಷಯ ಅಧ್ಯಯನದಲ್ಲಿ ಮಂಡಿಸಿದ ಪ್ರಬಂಧಕ್ಕೆ ಪಿಎಚ್ಡಿ ಪದವಿ ನೀಡಲಾಗಿದೆ ಎಂದು ವಿಶ್ವ ವಿದ್ಯಾನಿಲಯದ ಕುಲಸಚಿವ ಪ್ರೊ.ಸಿ.ಕೆ. ರಮೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಡಕುಟುಂಬದಲ್ಲೂ ಶಿಕ್ಷಣದಲ್ಲಿ ಸಾಧನೆ ಮಾಡುವ ಮೂಲಕ ಪಿಎಚ್ಡಿ ಪದವಿ ಪಡೆದುಕೊಂಡಿರುವ ಮಾರಣ್ಣ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಮಾದರಿಯಾಗಿದ್ದಾರೆ ಎಂದು ಗ್ರಾಮದ ಕನ್ನಡ ಸಾಂಸ್ಕೃತಿಕ ಸಂಸ್ಥೆ ಅಧ್ಯಕ್ಷ ಕರ್ಲಕುಂಟೆ ತಿಪ್ಪೇಸ್ವಾಮಿ ಅಭಿನಂದಿಸಿದ್ದಾರೆ.
About The Author
Discover more from JANADHWANI NEWS
Subscribe to get the latest posts sent to your email.